ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತನಿಧಿ ಕೇಂದ್ರ, ಡ್ಯಾಪ್ಕೋ ಘಟಕ ಹಾಗೂ ಭಾಂಗಬಾಸಿ ಸಮಾಜದ ಸಾರ್ವಜನಿಕ ದುರ್ಗಾ ಪೂಜಾ ಸಮಿತಿಯವರು ಸಂಘಟಿಸಿದ್ದರು.
Leave a Comment