ಕಾರವಾರ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.
ಅವರು ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ. ಒಳ್ಳೆಯವರಲ್ಲಿ ಕೆಟ್ಟಗುಣಗಳು ಮತ್ತು ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಕೂಡ ಇರುತ್ತವೆ. ಇದಕ್ಕೆ ಮಹರ್ಷಿ ವಾಲ್ಮೀಕಿ ಉತ್ತಮ ಉದಾರಣೆಯಾಗಿದ್ದಾರೆ. ಮತ್ತು ಅವರು ರಚಿಸಿದಂತಹ ರಾಮಾಯಣದ ವಿವಿಧ ಪಾತ್ರಗಳಲ್ಲಿರುವ ಒಳ್ಳೆಯ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಾಯಣ ಸಂಸ್ಕøತದಲ್ಲಿರುವ ಮಹಾ ಕಾವ್ಯವಾಗಿದೆ. ಸನ್ಮಾರ್ಗದಲ್ಲಿ ನಡೆಯುವಂತೆ ತೋರಿಸುವ ರಾಮಾಯಣ ಕತೆಗೆ 90ರ ದಶಕದಲ್ಲಿ ದೂರದರ್ಶನದಲ್ಲಿ ಪ್ರಸಾರಗೊಂಡ ರಾಮಾಯಣ ಧಾರಾವಾಹಿಯೇ ಸಾಕ್ಷಿಯಾಗಿದೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿ ಕುರಿತು ದಿವೇಕರ ಕಾಮರ್ಸ ಕಾಲೇಜಿನ ನಿವೃತ್ತ ಪ್ರಾಚಾರ್ಯ ರಾಮಕೃಷ್ಣ ಗುಂದಿ ಮಾತನಾಡಿ, ವಾಲ್ಮೀಕಿ ಮೊದಲು ದರೋಡೆಕೊರನಾಗಿದ್ದು ಜನರಿಗೆ ಹಾನಿಯನ್ನೂಂಟು ಮಾಡುತ್ತಿದ್ದ ನಾರದ ಮುನಿಯಿಂದ ಮನ: ಪರಿವರ್ತಿಸಿಕೊಂಡು ಜನರು ಸನ್ಮಾರ್ಗದತ್ತ ಹೋಗುವಂತಹ ರಾಮಾಯಣ ಕೃತಿ ರಚಿಸಿ ಮಹಾನ ಕವಿಯಾದ. ಮನುಷ್ಯನ ಮನ ಪರಿವರ್ತನೆಗೆ ವಾಲ್ಮೀಕಿ ಸಾಕ್ಷಿಯಾಗಿದ್ದಾನೆ. ಇಂತಹ ಮಹಾಪುರುಷರ ಜಯಂತಿ ಆಚರಿಸುವ ಮೂಲಕ ಯುವ ಪಿಳಿಗೆಗೆ ಒಳ್ಳೆಯ ಮಾರ್ಗದತ್ತ ನಡೆಯವ ಮಹತ್ವ ತಿಳಿಸಬೇಕಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಪೊಲೀಸವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಎಸಿ ಶಿವಾನಂದ ಕರಾಳೆ, ನಗರಸಭೆ ಪೌರಾಯುಕ್ತ ಯೋಗೇಶ್ವರ ಎಸ್. ಕನ್ನಡ ಮತ್ತು ಸಂಸಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ,.ಯು.ಸಿ.ಯಲ್ಲಿ 2016-17 ರಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಕಲ್ಪನಾ ಕಲಾಲೋಕ ತಂಡದವರು ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಕುರಿತ ನೃತ್ಯ ರೂಪಕ ಪ್ರದರ್ಶಿಸಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕಾರವಾರ ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಭಾವಚಿತ್ರ ಮೆರಣಿಗೆಯನ್ನು ನಡೆಸಲಾಯಿತು. ಮೆರವಣಿಗೆಯು ಜಿಲ್ಲಾಧಿಕಾರಿಗಳ ಸಭಾಂಗಣದಿಂದ ಹೊರಟು ಕೊರ್ಟಸರ್ಕಲ್, ಸುಭಾಸ್ ಸರ್ಕಲ್ ಸವಿತಾ ಹೋಟೆಲ ಸರ್ಕಲ್ ಮೂಲಕ ಸಾಗಿ ಜಿಲ್ಲಾ ರಂಗಮಂದಿರದಲ್ಲಿ ಕೊನೆಗೊಂಡಿತು. ವಿವಿಧ ಸಂಘ ಸಂಸ್ಥೆಗಳು, ಶಾಲಾ, ಕಾಲೇಜು ಮಕ್ಕಳು, ಗಣವೇಶದಾರಿಗಳು ಮೇರವಣಿಗೆಯಲ್ಲಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುರುಷೋತ್ತಮ ಎಸ್ ಸ್ವಾಗತಿಸಿದರು.
Leave a Comment