ಹೊನ್ನಾವರ . ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ. ಮನುಷ್ಯನ ಮನಸ್ಸನ್ನು ಅಹ್ಲಾದಗೊಳಿಸಿ ಚಟುವಟಿಕೆಯಿಂದ ಇರುವಂತೆ ಕ್ರೀಡೆ ಮಾಡುತ್ತದೆ. ಅತ್ಯಂತ ಅಚ್ಚುಕಟ್ಟಾಗಿ ಕ್ರೀಡಾಕೂಟವನ್ನು ಸಂಘಟಿಸಿದ್ದೀರಿ. ಇಲ್ಲಿಯ ಪ್ರತಿಭೆ ರಾಷ್ಟ್ರಮಟ್ಟದ ವರೆಗೆ ಪಸರಿಸಲಿ ಎಂದು ಶಾಸಕಿ ಶಾರದಾ ಮೋಹನ ಶೆಟ್ಟಿ ನುಡಿದರು. ಅವರು ನಗರದ ಸೇಂಟ್ ಅಂತೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿದ ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ಈಶ್ವರ ನಾಯ್ಕ ಮಾತನಾಡಿ ನಮ್ಮ ತಾಲೂಕು ಕ್ರೀಡೆಯಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಗುರುತಿಸಲ್ಪಟ್ಟಿದೆ. ಇದಕ್ಕೆ ಕಾರಣ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು. ಈ ಬಾರಿಯೂ ಇಲ್ಲಿಯ ಕ್ರೀಡಾಪಟುಗಳು ಉತ್ತಮವಾಗಿ ಬೆಳಗಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಜೈನಾಬಿ ಸಾಬ್ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ, ಕ್ಷೇತ್ರ ಸಮನ್ವಯಾಧಿಕಾರಿಯಾದ ಜಿ.ಎಸ್. ನಾಯ್ಕ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸುರೇಶ ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಎನ್.ಗೌಡ, ಹಳದೀಪುರ ಗ್ರಾಮ ಪಂಚಾಯತ ಸದಸ್ಯರಾದ ವಿನಾಯ್ಕ ಶೇಟ್, ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ, ಸಾಧನಾ ಬರ್ಗಿ ಉಪಸ್ಥಿತರಿದ್ದರು.
ಕ್ರೀಡಾಕೂಟವು ಅತ್ಯಂತ ಶಿಸ್ತುಬದ್ಧವಾಗಿ ನಡೆಯಿತು. ಕ್ರೀಡಾಕೂಟದ ಸಂಘಟನೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಗೌರೀಶ ಭಂಡಾರಿ, ಯಶ್ವಂತ ಮೆಸ್ತಾ, ಕೃಷ್ಣ ಗೌಡ, ವಿನೋದ ಮೇಸ್ತಾ, ರಮೇಶ ಅಂಬಿಗ ರವರು ಸಹಕರಿಸಿದ್ದರು. ಸರ್ವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಸ್ವಾಗತಿಸಿದರು. ಮಹೇಶ ಶೆಟ್ಟಿ ವಂದಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಆರ್.ಬಿ.ಶೆಟ್ಟಿ, ಬಿ.ಎಮ್. ಭಟ್ ಮಾಡಿದರು.
Leave a Comment