ಹೊನ್ನಾವರ ,ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನೆರವೇರಿತು.
ಸಮಾರೋಪ ಸಮಾರಂಭದ ಅತಿಥಿಗಳಾಗಿ ಕೃಷ್ಣಮೂರ್ತಿ ಹೆಬ್ಬಾರ, ನಾಗರಿಕ ಪತ್ರಿಕೆಯ ಸಂಪಾದಕರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವ ಅಂಶಗಳನ್ನು ವಿವರಿಸಿದರು.
ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಕೃಷ್ಣಮೂರ್ತಿ ಭಟ್ಟ ಶಿವಾನಿ ಇವರು ಮಾತನಾಡಿ ವಿಜೇತರಿಗೆ ಬಹುಮಾನ ವಿತರಿಸಿದರು.
ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯ ಅತೀ ಹೆಚ್ಚು ಅಂಕ ಪಡೆಯುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ಹಾಗೂ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜು ಕುಮಟ ರನ್ನರ್ಸ್ ಅಪ್ ಆಗಿ ಪ್ರಶಸ್ತಿ ಗಳಿಸಿಕೊಂಡಿತು.
ಕುಮಾರಿ ಸಂಗೀತಾ ನಾಯ್ಕ & ಸಂಗಡಿಗರು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದರು.
ಸಮಾರೋಪ ಸಮಾರಂಭದಲ್ಲಿ ಪ್ರಾಚಾರ್ಯರಾದ ಪ್ರೊ. ಎಸ್. ಎಸ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು.
ಸಂಚಾಲಕರಾದ ಡಾ. ಎಂ. ಆರ್. ನಾಯಕ ಸ್ವಾಗತಿಸಿ ಪರಿಚಯಿಸಿದರು. ಪ್ರೊ. ನಾಗರಾಜ ಹೆಗಡೆ ಅಪಗಾಲ ಹಾಗೂ ಪ್ರೊ. ಪ್ರಶಾಂತ ಹೆಗಡೆ ನಿರ್ವಹಿಸಿದರು.
Leave a Comment