ಕಾರವಾರ:
ಧಾರವಾಡ ರಂಗಾಯಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟ, ವಿಭಾಗ ಮಟ್ಟ ಹಾಗೂ ರಾಜ್ಯ ಮಟ್ಟದ ಅಂತರ ಕಾಲೇಜು ನಾಟಕ ಮತ್ತುಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ.
ಕಾಲೇಜುಗಳಲ್ಲಿ ದೇಶೀಯ ಸಾಂಸ್ಕøತಿಕ ವಾತಾವರಣವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಭಾಗವಹಿಸಲು ಇಚ್ಚಿಸುವವರು ಅರ್ಜಿ ನಮೂನೆಯನ್ನು ಜಿಲ್ಲೆಯ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಾರವಾರ ಇಲ್ಲಿ ಅಥವಾ ಧಾರವಾಡ ರಂಗಾಯಣ ಕಛೇರಿಯಿಂದ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು ರಂಗಾಯಣ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರ ಕಾಲೇಜು ರಸ್ತೆ ಧಾರವಾಡ ಈ ವಿಳಾಸಕ್ಕೆ ಇದೇ 13ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರಂಗಾಯಣ ವೆಬ್ಸ್ಯೆಟ್ http://www.dharwadrangayana.org ಅಥವಾ ದೂರವಾಣಿ ಸಂಖ್ಯೆ 0836-2441706 ಸಂಪರ್ಕಿಸಬಹುದಾಗಿದೆ.
Leave a Comment