ಹೊನ್ನಾವರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಸಿದ್ದರಾಮಯ್ಯ ಮಾದರಿ ಮುಖ್ಯಮಂತ್ರಿ ಎನಿಸಿ ಕೊಂಡಿದ್ದಾರೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಹಸಿದವರಿಗೆ ಹೊಟ್ಟೆ ತುಂಬಾ ಊಟ ಮಾಡಿ ಮಲಗಲು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ ಸಿದ್ದರಾಮಯ್ಯ, ತಾನೆಂದೂ ಬಡವರ ಪರ ಎಂದು ಸಾಬಿತುಪಡಿಸಿದ್ದಾರೆ. ಇಂತಹ ಅನೇಕ ಜನಪರ ಯೋಜನೆಗಳನ್ನು ಕರ್ನಾಟಕ ಸರಕಾರ ಜಾರಿಗೆ ತಂದಿದ್ದು ಪ್ರಚಾರದ ಕೊರತೆ ಎದುರಿಸುತ್ತಿದ್ದು ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮನೆಮನೆಗೆ ಕಾಂಗ್ರೆಸ್ ಎನ್ನುವ ಪಕ್ಷದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಕೆ.ಪಿ.ಸಿ.ಸಿ. ಪ್ರಧಾನಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡ ಮಾತನಾಡಿ ಕಾರ್ಯಕರ್ತರು ತಮ್ಮೊಳಗಿನ ಭಿನ್ನಾಭಿಪ್ರಾಯವನ್ನು ಮರೆತು ಪಕ್ಷದ ಏಳ್ಗೆಗಾಗಿ ಹಗಲು ರಾತ್ರಿ ದುಡಿಯುವಂತೆ ಕರೆ ನೀಡಿದರು. ರಾಹುಲ್ಗಾಂಧಿ ಪಕ್ಷವನ್ನು ಹೊಸ ಮಾದರಿಯಲ್ಲಿ ತಳಹಂತದಿಂದ ಸಂಘಟಿಸುತ್ತಿದ್ದು ಮುಂದಿನ ದಿನದಲ್ಲಿ ಯಾವೊಬ್ಬ ಕಾರ್ಯಕರ್ತರಿಗೂ ಅನ್ವಯವಾಗದ ರೀತಿಯಲ್ಲಿ ನೋಡಿಕೊಳ್ಳುವ ಭರವಸೆಯನ್ನು ಕಾರ್ಯಕರ್ತರಿಗೆ ನೀಡಿದರು. ಮುಂಬರುವ 25 ನೇ ತಾರೀಖಿನೊಳಗೆ ಕಾಂಗ್ರೆಸ್ ಮನೆಮನೆ ಕಾಂಗ್ರೆಸ್ ಕಾರ್ಯಕ್ರಮವನ್ನು ಪ್ರತಿ ಬೂತ್ ಮಟ್ಟದಲ್ಲಿ ಮುಗಿಸುವಂತೆ ಕರೆ ನೀಡಿದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಅತೀ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಪ್ರಗತಿಯಲ್ಲಿದೆ ಎಂದುರು..
ರಾಜ್ಯ ಹಿಂದುಳಿದ ವರ್ಗ ವಿಭಾಗದ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಮಾತನಾಡಿ ಶಾರದಾ ಶೆಟ್ಟಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ಕೊಟ್ಯಾಂತರ ರೂಪಾಯಿಗಳನ್ನು ಕ್ಷೇತ್ರಕ್ಕೆ ಒದಗಿಸಿದ್ದಾರೆ ಎಂದು ಪ್ರಶಂಸಿಸಿದರು. ಹಿಂದೆಂದೂ ಕಾಣದಷ್ಟು ಪ್ರಗತಿ ಕುಮಟಾ-ಹೊನ್ನಾವರ ಕ್ಷೇತ್ರದಲ್ಲಿ ನಡೆಯುತ್ತಿದ್ದು ಇದು ತನ್ನ ತಾಯಿಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಎಂದರು.
(………..2)
-2-
ಬೂತ್ ಅಧ್ಯಕ್ಷರ ಪರವಾಗಿ ಮಾತನಾಡಿದ ಮೋಹನ ಆಚಾರಿ ಹಳದೀಪುರ ನಾವು ಮನೆ ಮನೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನು ಪ್ರತಿ ಮನೆಗೆ ತಲುಪಿಸುವ ವ್ಯವಸ್ಥೆಯನ್ನು ಶೃದ್ಧೆಯಿಂದ ಮಾಡುತ್ತೇವೆ. ಆದರೆ ಚುನಾವಣೆಯ ನಂತರ ನಾವೆಲ್ಲಾ ಎಲೆಮರೆಯ ಕಾಯಿಯಂತಾಗುತ್ತೇವೆ ಎಂದು ದುಃಖ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹುಸೇನ್ ಖಾದ್ರಿ ಮಾತನಾಡಿ ನಮ್ಮವರೇ ನಮ್ಮ ಪಕ್ಷಕ್ಕೆ ಮುಳ್ಳಾಗಿರುವುದು ತೀರಾ ವಿಷಾದದ ಸಂಗತಿ ಎಂದರು. ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿದವರು ಪಕ್ಷಕ್ಕೆ ದ್ರೋಹವೆಸಗುವ ಬಗ್ಗೆ ಹೈಕಮಾಂಡ್ಗೆ ವರದಿ ಸಲ್ಲಿಸುವಂತೆ ಡಾ || ರಾಜ್ನಂದಿನಿಯವರನ್ನು ಆಗ್ರಹಿಸಿದರು.
ಸಭೆಯಲ್ಲಿ ಮನೆಮೆನಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಇನ್ನಷ್ಟು ಚುರುಕುಗೊಳಿಸಲು ಪ್ರತಿ ಜಿಲ್ಲಾ ಪಂಚಾಯತ್ ಮತ್ತು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಮೂರು ವೀಕ್ಷಕರ ಸಮಿತಿಗಳನ್ನು ರಚಿಸಲಾಯಿತು. ಪಕ್ಷದ ಹಿರಿಯ ನಾಯಕರಾದ ದಾಮೋದರ ನಾಯ್ಕ ವಿನಾಯಕ ಶೇಟ್ ಹಳದೀಪುರ ಮತ್ತು ನಾರ್ಣಪ್ಪ ಗೌಡ ಕೆಕ್ಕಾರ ಇವರನ್ನೊಳಗೊಂಡ ವೀಕ್ಷಕರ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಜೈನಾಬಿ ಸಾಬ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾ ಗೌಡ, ತಾಲೂಕಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೇತ್ರಾವತಿ ಹೆಗಡೆ, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ರಾಮನಾಥ ನಾಯ್ಕ ಕರ್ಕಿ, ಐ.ವಿ. ನಾಯ್ಕ ನಗ್ರೆ, ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಂಬೋದರ ನಾಯ್ಕ ವಂದಿಸಿದರು.
ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಶಾನಕಿ ಶಾರದಾ ಎಂ. ಶೆಟ್ಟಿಯವರಿಗೆ ಬೆಂಗಳೂರಿನಿಂದ ದೂರವಾಣಿ ಕರೆ ಬಂದು, ಹೊನ್ನಾವರ ನಗರಕ್ಕೆ ಸರಬರಾಜಾಗುವ 120 ಕೋಟಿ ರೂಪಾಯಿ ವೆಚ್ಚದ ಶರಾವತಿ ಕುಡಿಯುವ ನೀರು ಯೋಜನೆ ಮಂಜೂರಿಗಾಗಿ ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡನೆಯಾಗಲಿದ್ದು, ಮಂಜೂರಾತಿ ಸಿಗುವ ಕುರಿತು ಸಭೆಯಲ್ಲಿ ಶಾಸಕಿ ಹರ್ಷ ವ್ಯಕ್ತಪಡಿಸಿದರು. ಶಾಸಕಿ ಶಾರದಾ ಶೆಟ್ಟಿಯವರ ಅವಿರತ ಹೋರಾಟಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿತು.
Leave a Comment