ಕಾರವಾರ:
ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರ ಬಂದ ಬಿಜೆಪಿ ಮುಖಂಡರನ್ನು ಬರ ಮಾಡಿಕೊಳ್ಳಲು ಆಗಮಿಸಿದ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಮುಖಂಡ ಗೋವಿಂದ ನಾಯ್ಕ ಹಾಗೂ ಕೃಷ್ಣ ಆಸರಕೇರೆ ಎಂಬಾತರನ್ನು ಸೆ.14ರಂದು ಭಟ್ಕಳ ಪುರಸಭೆ ವ್ಯಾಪ್ತಿಯ ವ್ಯಾಪಾರ ಮಳಿಗೆ ಹರಾಜು ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಹಲವರ ಮೇಲೆ ದೂರು ದಾಖಲಿಸಿದ್ದ ಪೊಲೀಸರು ಇಬ್ಬರನ್ನು ಮಾತ್ರ ಬಂಧಿಸಿದ್ದು, ಕೆಲವರು ತಲೆಮರೆಸಿಕೊಂಡಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ಕಾರವಾರ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೆ ಆದೇಶಿಸಿತ್ತು. ಬಿಜೆಪಿ ಮುಖಂಡರ ಬಿಡುಗಡೆ ವೇಳೆ ಅವರನ್ನು ಬರ ಮಾಡಿಕೊಳ್ಳಲು ಇತರ ಆರೋಪಿಗಳು ಆಗಮಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಆರೋಪಿಗಳನ್ನು ವಶಕ್ಕೆ ಪಡೆದಿರುವದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಖಚಿತ ಪಡಿಸಿದರು. ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಹಾಗೂ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವದಾಗಿ ತಿಳಿಸಿದರು.
Leave a Comment