• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್

October 18, 2017 by Sachin Hegde Leave a Comment

ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಿಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ವೈವಿಧ್ಯಮಯ ಸಾಂಸ್ಕøತಿಕ ತಂಡಗಳಿಂದ ಕಲಾ ಪ್ರದರ್ಶನವಿರಲಿದೆ. ಇದರೊಂದಿಗೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಸಹ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಇಲಾಖೆಗಳು ವಿವಿಧ ಸಂದೇಶಗಳನ್ನು ಸಾರುವ ಸ್ತಬ್ಧಚಿತ್ರಗಳನ್ನು ಕಲಾತ್ಮಕವಾಗಿ ರೂಪಿಸಬೇಕು. ಮೆರವಣಿಗೆ ಆರಂಭವಾಗುವ ಮೊದಲೇ ಸ್ತಬ್ಧಚಿತ್ರಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಜ್ಜುಗೊಳಿಸಿರಬೇಕು ಎಂದು ಅವರು ಸೂಚಿಸಿದರು.
ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿವಿಧ ತಂಡಗಳಿಂದ ಪರೇಡ್ ನಡೆಯಲಿದ್ದು, ತಂಡಗಳಿಗೆ ಮೊದಲೇ ಸಮರ್ಪಕ ತರಬೇತಿಯನ್ನು ನೀಡಬೇಕು. ಬೆಳಗ್ಗೆ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿಡಿಪಿಐ ಕಾರವಾರ ಹಾಗೂ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇದರ ಮೇಲುಸ್ತುವಾರಿ ನಿರ್ವಹಿಸಬೇಕು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಸಾರ್ವಜನಿಕರು, ಸಂಘಸಂಸ್ಥೆಗಳು ಸ್ವ-ಇಚ್ಛೆಯಿಂದ ದೊಡ್ಡ ಪ್ರಮಾಣದಲ್ಲಿ ಭಾಗಿಯಾಗಬೇಕು. ಎಲ್ಲಾ ತಾಲೂಕು ಮತ್ತು ಗ್ರಾಮ ಮಂಚಾಯತ ಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.
ಕಚೇರಿಗಳಿಗೆ ದೀಪಾಲಂಕಾರ ಹಾಗೂ ನಗರಸಭೆಯವರು ಪ್ರಮುಖ ವೃತ್ತಗಳಲ್ಲಿ ಕೂಡ ದೀಪಲಂಕಾರ ಮಾಡಬೇಕು, ಮೆರವಣಿಗೆ ಸಾಗುವ ಹಾದಿಯಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವ್ಯವಸ್ಥೆ ಮಾಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karwar News Tagged With: 8ಗಂಟೆಗೆ, ಆಚರಿಸಲು, ಎಲ್ಲಾ ಕ್ರಮ, ಎಸ್.ಎಸ್.ನಕುಲ್, ಕಚೇರಿ, ಕಾರವಾರ: ಕನ್ನಡ ರಾಜ್ಯೋತ್ಸವ, ಜಿಲ್ಲಾಧಿಕಾರಿ, ನವೆಂಬರ್ 1ರಂದು, ಮಾಡಲಾಗುವುದು, ಸಂಭ್ರಮದಿಂದ, ಸಿಹಿತಿಂಡಿ, ಸ್ವ-ಇಚ್ಛೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar