• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ

October 20, 2017 by Sachin Hegde Leave a Comment

ಹಳಿಯಾಳ:-

ಕಳೆದ ನಾಲ್ಕೂವರೆ ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಗೆ ಪ್ರಾಧಾನ್ಯತೆ ನೀಡಿದ್ದು ಅವುಗಳ ಸದುಪಯೋಗ ಪಡೆಯುವುದರ ಜೊತೆಗೆ ಸಾರ್ವಜನಿಕರು ಅಭಿವೃದ್ದಿ ಮತ್ತು ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡಲು ಸರ್ಕಾರ ಹಾಗೂ ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಬೇಕು ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಪಟ್ಟಣದ ಮಿನಿವಿಧಾನ ಸೌಧದಲ್ಲಿ 3 ಕೋಟಿ ರೂ ಅನುದಾನದಲ್ಲಿ ನಿರ್ಮಿಸಲಾದ ಮೊದಲನೇ ಅಂತಸ್ತು ನಿರ್ಮಾಣ, ಸಭಾಂಗಣ, ವಾಹನ ಪಾರ್ಕಿಂಗ್ ಯಾರ್ಡ, ಉಪಹಾರ ಗೃಹ, 20 ಲಕ್ಷ ರೂ ವೆಚ್ಚದ ಮಕ್ಕಳ ಗ್ರಂಥಾಲಯ, ಪುರಸಭೆ ವತಿಯಿಂದ ಅಂಗವಿಕಲ ಯುವಕರಿಗೆ ಇಂಧನ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ಭೂರಹಿತರಿಗೆ ಆರ್.ಟಿ,ಸಿ ಪತ್ರಗಳ ವಿತರಣೆ ಸೇರಿದಂತೆ ಇನ್ನಿತರ ಪಲಾನುಭವಿಗಳಿಗೆ ಸರ್ಕಾರದ ಹಕ್ಕು ಪತ್ರಗಳನ್ನು ವಿತರಿಸಿ ನೂತನ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭನ್ನುದ್ಧೇಶಿಸಿ ಅವರು ಮಾತನಾಡಿದರು.
ಈಗಾಲೇ ಹಳಿಯಾಳ ಮತ್ತು ಜೋಯಿಡಾ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಚುನಾವಣಾ ಪೂರ್ವ ನೀಡಿದ ಪ್ರಣಾಳಿಕೆಯ ಬಹುತೇಕ ಭರವಸೆಗಳನ್ನು ಈಡೇರಿಸಲಾಗಿದ್ದು ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಮಿನಿವಿಧಾನಸೌಧಗಳನ್ನು ಮಂಜೂರಿ ಮಾಡಲಾಗಿದೆ. ರಾಜ್ಯದ 4 ಕೋಟಿ ಬಡಜನರಿಗೆ ಅನ್ನಭಾಗ್ಯ ನೀಡುವುದರ ಮೂಲಕ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಜನರಿಗೆ ಉತ್ತಮ ಸ್ಪಂದನೆ ನೀಡಿ ಎಂದ ದೇಶಪಾಂಡೆ ಹಳಿಯಾಳ-ದಾಂಡೇಲಿ ಕಾಳಿ ನದಿ ನೀರಾವರಿ ಯೋಜನೆಗೆ ವಿರೋಧ ಪಕ್ಷದವರು ಅನವಶ್ಯಕ ಗೊಂದಲಗಳನ್ನು ಮೂಡಿಸುವುದರ ಮೂಲಕ ಜನರಿಗೆ ತಪ್ಪು ಸಂದೇಶವನ್ನು ನೀಡಿದ್ದು ಅಂತಹ ನಾಯಕರಿಗೆ ತಕ್ಕ ಉತ್ತರ ದೊರೆತಿದ್ದು ಸದ್ಯದಲ್ಲೇ ಯೋಜನೆ ಕಾರ್ಯ ಪ್ರಾರಂಭವಾಗಲಿದ್ದು ಆರು ತಿಂಗಳಲ್ಲಿ ಯೋಜನೆಯು ಪೂರ್ಣಗೊಳ್ಳುವ ಭರವಸೆ ನೀಡಿದರು.
ಹಳಿಯಾಳದಲ್ಲಿ 24*7 ಮಾದರಿಯ ಕುಡಿಯುವ ನೀರಿನ ಯೋಜನೆ ರಾಜ್ಯದಲ್ಲೇ ಪ್ರಥಮವಾಗಿ ಅನುಷ್ಠಾನಗೊಳಿಸಲಾಗಿದ್ದು ಪ್ರಾಯೋಗಿಕ ಪರೀಕ್ಷೆಯು ಯಶಸ್ವಿಯಾಗಿದ್ದು ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಹಳೀಯಾಳಕ್ಕೆ ಆಗಮಿಸಿ 24*7 ಮಾದರಿ ಕುಡಿಯುವ ನೀರಿನ ಯೋಜನೆ ಉಧ್ಘಾಟಿಸಲಿದ್ದು ಜನರಿಗೆ ಉಪಯೋಗವಾಗಲಿದೆ ಎಂದರು.
ಸಮಾರಂಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ, ತಹಶೀಲದಾರ ವಿದ್ಯಾಧರ ಗುಳಗುಳಿ, ಜಿಪಂ ಸದಸ್ಯರಾದ ಕೃಷ್ಣಾ ಪಾಟೀಲ್, ಲಕ್ಷ್ಮೀ ಕೋರ್ವೆಕರ, ಬ್ಲಾಕ್ ಅಧ್ಯಕ್ಷ ಸುಭಾಶ ಕೋರ್ವೆಕರ, ತಾಪಂ ಅಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಮುಖ್ಯಾಧಿಕಾರಿ ಕೇಶವ ಚೌಗುಲೆ,ಲೋಕೊಪಯೋಗಿ ಇಲಾಖೆಯ ಇಇ ಸಜ್ಜನ್, ಎಇಇ ಆರ್.ಎಚ್. ಕುಲಕರ್ಣಿ, ಭೂದಾಖಲೆ ಇಲಾಖೆಯ ಉಪ ನಿರ್ದೇಶಕ ಬಿ.ಎಸ್. ವೇಣುಗೋಪಾಲ್ ಇತರರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: ಅಭಿವೃದ್ದಿ ಪರಿಪೂರ್ಣವಾಗಲು, ಜನರ ಸಹಕಾರ, ಮತ್ತು, ಮಾತ್ರ, ಸಚಿವ ಆರ್.ವಿ.ದೇಶಪಾಂಡೆ, ಸಹಭಾಗಿತ್ವದಿಂದ, ಸಾಧ್ಯವಾಗುತ್ತದೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar