ಕಾರವಾರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ತಂದು ಮೀನುಗಾರರ ಸಾಲಮನ್ನಾಗೆ ಪ್ರಯತ್ನಿಸಲಾಗುವದು ಎಂದು ಹೇಳಿದರು.
ಬುಧವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಕರ 50 ಸಾವಿರ ರೂ ಸಾಲಮನ್ನಾ ಮಾಡಲಾಗಿದೆ. ಆದರೆ, ಮೀನುಗಾರರಿಗೆ ಸರ್ಕಾರ ಯಾವದೇ ಕೊಡುಗೆ ನೀಡಿಲ್ಲ. ಹೀಗಾಗಿ ಎಲ್ಲಾ ಮೀನುಗಾರರು ಸೇರಿ ಜಿಲ್ಲಾ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿಯವರ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ನಿರ್ಣಯಿಸಲಾಗಿದೆ ಎಂದರು. ಮುಂದಿನ ಬಜೇಟ್ನಲ್ಲಿ ಮೀನುಗಾರರ ಸಾಲಮನ್ನಾವೂ ಘೋಷಣೆಯಾಗುವ ವಿಶ್ವಾಸ ವ್ಯಕ್ತಪಡಿಸಿದರು. ಮೀನುಗಾರರ ಕುರಿತು ಕಾಳಜಿ ಹೊಂದಿರುವ ರಾಹುಲ್ ಗಾಂಧಿ ಉತ್ತರ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಮೀನುಗಾರಿಕಾ ದೋಣಿಗಳಲ್ಲಿ ಸಂಚರಿಸುವ ಬಯಕೆ ಹೊಂದಿದ್ದಾರೆ. ಎರಡು ಗಂಟೆಗಳ ಕಾಲ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಆಸಕ್ತಿ ರಾಹುಲ್ ಗಾಂಧಿಯವರಲ್ಲಿದೆ. ಇನ್ನು ಜಿಲ್ಲೆಯಲ್ಲಿ ಭೃಹತ್ ಸಮ್ಮೇಳನವೂ ನಡೆಯಲಿದೆ ಎಂದರು.
ಮೀನುಗಾರರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಹಿಂದಿನಿಂದಲೂ ಒತ್ತಾಯಿಸಲಾಗುತ್ತಿದೆ. ಕುಮಟಾ ಅಥವಾ ಭಟ್ಕಳದಲ್ಲಿ ನಡೆಯುವ ಸಮಾವೇಶದಲ್ಲಿ ಈ ಬಗ್ಗೆ ಹಕ್ಕೋತ್ತಾಯ ಮಾಡಲಾಗುತ್ತದೆ ಎಂದರು. ಎಲ್ಲಡೆ ಮೀನುಗಾರರ ಕಾಂಗ್ರೆಸ್ ಸಮಿತಿ ಸ್ಥಾಪಿಸಲಾಗಿದ್ದು, ಇದರ ಮೂಲಕ ಮೀನುಗಾರರ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ತಿಳಿಸಿದರು. ಪ್ರಮುಖರಾದ ರಾಮ ಮೋಗೇರ್ ಇತರರಿದ್ದರು.
Leave a Comment