ಕಾರವಾರ: ಸರ್ಕಾರಿ ಶಿಷ್ಟಾಚಾರದಂತೆ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭಾ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿದ ಅವರು, ಟಿಪ್ಪು ಸುಲ್ತಾನ್ ಅವರ ಜೀವನಗಾಥೆ ಸ್ಮರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಅದರಂತೆ ನವೆಂಬರ್ 10ರಂದು ಜಿಲ್ಲಾ ರಂಗ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು. ಜಗತ್ತಿಗೆ ರಾಕೆಟ್ ತಂತ್ರಜ್ಞಾನ ಪರಿಚಯಿಸಿದ ಹಜರತ್ ಟಿಪ್ಪು ಸುಲ್ತಾನ್ ರಾಕೆಟ್ ತಂತ್ರಜ್ಞಾನ ಬಳಸಿ ಯುದ್ಧ ಮಾಡುವ ಕಲೆಯನ್ನು ಪ್ರಪ್ರಥಮ ಬಾರಿಗೆ ಜಗತ್ತಿಗೆ ಪರಿಚಯಿಸಿದವರು. ರಾಕೆಟ್ ತಂತ್ರ ಬಳಸಿಯೇ ಆಂಗ್ಲರು ಫ್ರೆಂಚರ ವಿರುದ್ಧ ಯು ಮಾಡಿ ಗೆದ್ದರು. ಅಂತ ವ್ಯಕ್ತಿತ್ವದ ಸರ್ಕಾರಿ ಕಾರ್ಯಕ್ರಮ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. ಟಿಪ್ಪು ಸುಲ್ತಾನ್ ಅವರ ಜಯಂತಿ ಅಂಗವಾಗಿ ಕಾರವಾರದ ವಿವಿಧ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಅಥವಾ ಚಿತ್ರ ರಚನಾ ಸ್ಪರ್ಧೆ ಆಯೋಜಿಸಲಾಗುವುದು. ಈ ಮೂಲಕ ಟಿಪ್ಪು ಸುಲ್ತಾನ್ ವ್ಯಕ್ತಿತ್ವದ ಕುರಿತು ಮುಂದಿನ ಪೀಳಿಗೆಗೆ ಪರಿಸಚಯಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿನಾಯಕ ಪಾಟೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ್, ಮುಸ್ಲೀಂ ಸಮುದಾಯದ ಮುಖಂಡರು ಭಾಗವಹಿಸಿದ್ದರು.
Leave a Comment