ಹೊನ್ನಾವರ
ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು.
ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ಕಾಂತ ಕೊಚರೇಕರ್, ತಾ.ಪಂ. ಅಧ್ಯಕ್ಷ ಉಲ್ಲಾಸ ನಾಯ್ಕ ಕುದ್ರಿಗಿ, , ಜಿ.ಪಂ. ಸದಸ್ಯೆ ಪುಷ್ಪಾ ನಾಯ್ಕ, ಗ್ರಾಮ ಪಂಚಾಯತ್ ಅಧ್ಯಕ್ಷ ಈಶ್ವರ ನಾಯ್ಕ ಕುದ್ರಿಗೆ, ಡಿ,ಸಿ,ಸಿ, ಸದಸ್ಯÀ ಯೋಗೇಶ ರಾಯ್ಕರ್, ವಾಮನ ನಾಯ್ಕ ಮಂಕಿ, ಮಾಜಿ ಜಿ.ಪಂ. ಸದಸ್ಯ ಕೃಷ್ಣ ಗೌಡ, ಕಿಸಾನ್ ಸೆಲ್ ಅಧ್ಯಕ್ಷ ಅಣ್ಣಪ್ಪ ಗೌಡ, ತಾ.ಪಂ. ಸದಸ್ಯ ಅಣ್ಣಯ್ಯ ನಾಯ್ಕ, ಬ್ಲಾಕ್ ಕಾಂಗ್ರೇಸ್ ಪದಾಧಿಕಾರಿÀ ಗೋವಿಂದ ನಾಯ್ಕ ಮಂಕಿ , À ಅಬ್ದುಲ್ ಸತ್ತಾರ್ ಸಾಬ್ ಸಂಶಿ, ಮುಂತಾದವರು ಉಪಸ್ಥಿತರಿದ್ದರು.
Leave a Comment