ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ಡಿಸೆಂಬರ 10 ರೊಳಗೆ ಸಲ್ಲಿಸಬಹುದು. ಆಸಕ್ತರು 18ರಿಂದ 35ರ ವಯೋಮಿತಿಯವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ 40,000/- ಕ್ಕಿಂತ ಕಡಿಮೆ ಇರುವ ಆಸಕ್ತ ಅಭ್ಯರ್ಥಿಗಳು ತಮ್ಮ ಕೈ ಬರಹ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಶಾಲಾ ಟಿ.ಸಿಯೊಂದಿಗೆ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ವಾಸಿಂ ಮಂಜಿಲ್, ಹೈ ಚರ್ಚ ಹತ್ತಿರ, ಕಾರವಾರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08382-223229ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಡಿ.ಡಿ. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment