ಹೊನ್ನಾವರ .ಅಂಕೋಲಾದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಣವಂತೆ ಮಕ್ಕಳು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಸಂಜನಾ ಗೌಡ, ದ್ವೀತಿಯ ಸ್ಥಾನ ಪಡೆದ ತೇಜಸ್ವೀನಿ ಗೌಡ ಇವರಿಬ್ಬರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಒಂದೇ ಸ್ಪರ್ಧೆಯಲ್ಲಿ ಒಂದೆ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದಿಂದ ರಾಜ್ಯಮಟ್ಟದವರೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಇಂತಹ ಸಾಧನೆಯನ್ನು 2014-15ರಲ್ಲಿ ಇದೇ ಶಾಲೆಯ ವಿದ್ಯಾರ್ಥಿಗಳಾದ ಅನುಷಾ ಗೌಡ ಮತ್ತು ಯೋಜೇಶ್ವರಿ ಮೇಸ್ತ ಮಾಡಿದ್ದರು. ಶಾಲೆಗೆ ಕೀರ್ತಿತಂದ ವಿದ್ಯಾರ್ಥಿಗಳಿಗೆ ಹಾಗೂ ಇವರಿಗೆ ತರಭೇತಿ ನೀಡಿದ ದೈಹಿಕ ಶಿಕ್ಷಕರಾದ ರಾಮಚಂದ್ರ ನಾಯಕರಿಗೆ ಶಾಲೆಯ ಮುಖ್ಯ ಗುರುಗಳು, ಸಹಶಿಕ್ಷಕರು, ಎಸ್.ಡಿ.ಎಮ್.ಸಿ ಯವರು ಕ್ಷೇತ್ರಶಿಕ್ಷಣಾಧಿಕಾರಿಗಳು, ದೈಹಿಕ ಪರಿವೀಕ್ಷಕರು, ಹಾಗೂ ಊರನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ
Leave a Comment