ಹಳಿಯಾಳ:-
ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದು ತಿಂಗಳಿಂದ ಬಿಡುವಿಲ್ಲದಂತೆ ತಮ್ಮ ಹಾಗೂ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ಅವರ ನೇತೃತ್ವದಲ್ಲಿ ಪಕ್ಷದ ಎಲ್ಲ ಸ್ತರದ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆ, ಹಳ್ಳಿ-ಹಳ್ಳಿಗಳಿಗೆ ತೆರಳಿ ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ಮೋದಿಜಿಯವರ ಅಭಿವೃದ್ದಿಪರ ನಡೆಗಳನ್ನು ಮನದಟ್ಟು ಮಾಡುವಲ್ಲಿ ಹಾಗೂ ಬಿಜೆಪಿ ಪರಿವರ್ತನಾ ರ್ಯಾಲಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಫಲವಾಗಿದ್ದೆ 20ಸಾವಿರ ಜನ ಕಾರ್ಯಕ್ರಮದಲ್ಲಿ ಸೇರಿ ಜಿಲ್ಲೆಯಲ್ಲೇ ದೊಡ್ಡ ಹಾಗೂ ಯಶಸ್ವಿ ಕಾರ್ಯಕ್ರಮವಾಗಿದ್ದು ಯಶಸ್ಸಿನ ಶ್ರೇಯ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದ ಹೆಗಡೆ ಕಾರ್ಯಕರ್ತರು ಹಾಗೂ ಮುಖಂಡರು ಹಾಗೂ ಸಭೆಯಲ್ಲಿ ಭಾಗವಹಿಸಿದ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮುಖಂಡರಾದ ವಿಎಮ್ ಪಾಟೀಲ್, ಎಸ್.ಎ.ಶೆಟವಣ್ಣವರ, ನಾಗರಾಜ ಗೌಡಾ, ಯಲ್ಲಪ್ಪಾ ಸಾಣಿಕೊಪ್ಪ, ಸಿದ್ದು ಶೆಟ್ಟಿ, ಕಮಲ ಗುರವ, ಸಿದ್ದು ಪಾಟಣಕರ ಮೊದಲಾದವರು ಇದ್ದರು.
Leave a Comment