ಕಾರವಾರ: ಮಕ್ಕಳು ಶಿಕ್ಷಿತರಾಗಬೇಕು, ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಕ್ಕಳ ದಿನಾಚಾರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳನ್ನು ಶಿಕ್ಷಿತರನ್ನಾಗಿಸುವಲ್ಲಿ ಹಲವಾರು ಯೋಜನೆಗಳು ಮತ್ತು ಸೌಕರ್ಯಗಳು ಇಂದು ಜಾರಿಯಲ್ಲಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಪದ್ಮಾ ರಾಯ್ ಉದ್ಘಾಟಿಸಿದರು. ಕಾರವಾರದ ಸ್ವರ-ಸಂಗೀತ ರಸಮಂಜರಿ ಕಲಾತಂಡದಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳನ್ನು ಹಾಗೂ ಪ್ರೇಕ್ಷಕರನ್ನು ಮಂತ್ರಮುಗ್ದರನ್ನಾಗಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗನ್ನು ತಂದರು. ಕಾರ್ಯಕ್ರಮದಲ್ಲಿ ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಗಂಗಪ್ಪ, ಮಕ್ಕಳ ಕಲ್ಯಾಣ ಸಮಿತಿ-01 ರ ಪದಾಧಿಕಾರಿಗಳಾದ ರಾಜೇಶ್ವರಿ ಕೆ.ಬಿ, ಜ್ಯೋತಿ ಮಿರಾಶಿ, ಮಾರುತಿ ನಿಲೇಕಣಿ, ಸತೀಶ ನಾಯ್ಕ, ಸಾಂತ್ವನ ಸಂಸ್ಥೆಯ ಕಾರ್ಯದರ್ಶಿ ವರದಾ ನಾಯ್ಕ ಮತ್ತಿತರು ಉಪಸ್ಥಿತರಿದ್ದರು.
Leave a Comment