• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ

November 26, 2017 by Sachin Hegde Leave a Comment

ಕಾರವಾರ: ಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವದಾಗಿ ಮಾಜಿ ಸಚಿವ, ಶಾಸಕ ಬಸವರಾಜ ಹೊರಟ್ಟಿ ಘೋಷಿಸಿದರು.
ಶನಿವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಭವಿಷ್ಯದ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ ರೇವಣ್ಣ ಚುನಾವಣೆಗೆ ಸ್ಪರ್ಧಿಸುವದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಕುಟುಂಬ ರಾಜಕಾರಣವಲ್ಲ ಎಂದು ಅವರು ಹೇಳಿದರು. ತಮ್ಮ ಪುತ್ರ ವಸಂತ ಹೊರಟ್ಟಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವವರು ಪಕ್ಷದಲ್ಲಿ ದುಡಿದಿರಬೇಕು. ಕಾರ್ಯಕರ್ತರೊಂದಿಗೆ ಬೆರತಿರಬೇಕು. ಅಂತವರನ್ನು ಗುರುತಿಸಿ ಪಕ್ಷ ಬಿ.ಪಾರಂ ವಿತರಿಸಲಿದೆ ಎಂದರು.
ಮಾಜಿ ಸಚಿವ ಆನಂದ ಅಸ್ನೋಟಿಕರ್ ಜೆಡಿಎಸ್ ಸೇರುವ ಕುರಿತು ಈಗಾಗಲೇ ಮಾತುಕತೆ ನಡೆದಿದೆ. ಅವರು ಪಕ್ಷಕ್ಕೆ ಬಂದರೆ ಬರಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಚುನಾವಣೆ ಹತ್ತಿರ ಬಂದಾಗ ಪಕ್ಷಾಂತರ ಸಹಜವಾಗಿದ್ದು, ಪದೇ ಪದೇ ಪಕ್ಷ ಬದಲಿಸುವವರನ್ನು ಜನ ನಂಬುವದಿಲ್ಲ. ಹೀಗಾಗಿ ಡಿ.31ರ ಒಳಗೆ ಜೆಡಿಎಸ್ ಪಕ್ಷ ಸೇರುವವರಿಗೆ ಅವಕಾಶವಿದ್ದು, ನಂತರ ಬರುವ ಆಕಾಂಕ್ಷಿಗಳಿಗೆ ಉತ್ತೇಜನ ನೀಡದಂತೆ ಸಲಹೆ ನೀಡಲಾಗಿದೆ ಎಂದು ತಿಳಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲಾ ಪಕ್ಷದವರಿಗೂ ಚುನಾವಣೆಯಲ್ಲಿ ಗೆಲ್ಲುವದೇ ಗುರಿಯಾಗಿದೆ. ನೀತಿ ನಿಯಮಗಳಿಗೆ ಬೆಲೆಯಿಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದ ಅಭಿವೃದ್ದಿ ಕುರಿತು ಚರ್ಚಿಸಲು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅನಾವಷ್ಯಕ ಕಾಲಹರಣ ಮಾಡಿದೆ. ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವದಕ್ಕಿಂತ ಹೆಚ್ಚಿಗೆ ಕಾಲೆಳೆಯುವ ಕೆಲಸವಾಗಿದೆ ಎಂದು ಅಸಮಧಾನ ಹೊರ ಹಾಕಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karwar News Tagged With: ಉತ್ತರ ಕರ್ನಾಟಕಕ್ಕೆ, ಉಪ ಮುಖ್ಯಮಂತ್ರಿ, ಘೋಷಣೆ, ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ, ಬಂದರೆ, ಬಸವರಾಜ ಹೊರಟ್ಟಿ, ಶಾಸಕ, ಸುದ್ದಿಗಾರರೊಂದಿಗೆ, ಸ್ಥಾನ, ಸ್ವತಂತ್ರ್ಯವಾಗಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar