ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು ಆಯೋಜಿಸಲಾಗಿದೆ.
ಈ ಹಿಂದೆ ತಿಳಿಸಿದಂತೆ ನವೆಂಬರ್ 30ರಂದು ನಡೆಯಬೇಕಿದ್ದ ಈ ಕಾರ್ಯಕ್ರಮವನ್ನು ಕಾರ್ಯ ಒತ್ತಡದ ಕಾರಣ ನವೆಂಬರ್ 29ರಂದೇ ನಡೆಸಲಾಗುತ್ತಿದ್ದು ಬಂದೂಕು ಪರವಾನಗೆ ಹಾಗೂ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ಅಂದು ಅರ್ಜಿ ಅರ್ಜಿ ಸ್ವೀಕರಿಸಲಾಗುವುದು ಎಂದು ಅವರು ತಿಳಿಸಿದರು.
ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ ದಿನಾಂಕ ಮತ್ತು ಸಮಯದಲ್ಲಿ ತಮ್ಮ ಆಯುಧ ಪರವಾನಗೆ ನವೀಕರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ನವೆಂಬರ್ 29ರಂದು ಮುಂಡಗೋಡ ತಹಸೀಲ್ದಾರ್ ಕಾರ್ಯಾಲಯದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಆಂದೋಲನ ನಡೆಯಲಿದ್ದು ಅನುಜ್ಞಪ್ತಿದಾರರು ಆಯಾ ತಹಸೀಲ್ದಾರ್ ಕಚೇರಿಯಲ್ಲಿ ನಿಗಲಿರುವ ನಿಗದಿತ ನಮೂನೆ ಎ3ನಲ್ಲಿ ಅರ್ಜಿ, ಎಸ್4ನಲ್ಲಿ ಪೊಲೀಸ್ ವರದಿ, ಎಸ್3ನಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಮತ್ತು ಲೆಕ್ಕ ಶೀರ್ಷಿಕೆ 005500104000 ನೇದಕ್ಕೆ ಸರ್ಕಾರಿ ಶುಲ್ಕ ರೂ.1500 ಜಮಾ ಮಾಡಿ, ಚಲನ್ ಮೂಲ ಪ್ರತಿ ಮತ್ತು ಪಹಣಿಯೊಂದಿಗೆ ಸಂಬಂಧಿತ ತಹಸೀಲ್ದಾರ್ ಕಚೇರಿಯಲ್ಲಿ ಸಲ್ಲಿಸಿ ಸ್ಥಳದಲ್ಲಿಯೇ ಬಂದೂಕು ಪರವಾನಗೆ ನವೀಕರಣ ಮಾಡಿಸಿಕೊಳ್ಳಬಹುದಾಗಿದೆ. ಈ ಆಂದೋಲನದ ಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment