ಹಳಿಯಾಳ:- ಕಳೆದ 34 ವರ್ಷಗಳಿಂದ ಹಳಿಯಾಳ ಪತ್ರಿಕಾರಂಗದಲ್ಲಿ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತ ಬಿ.ಆರ್.ವಿಭೂತೆ ಅವರಿಗೆ 2017ನೇ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಈ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 1983ರಲ್ಲಿ ಅಂದಿನ ಜನಪ್ರೀಯ “ ನವನಾಡು” ದಿನಪತ್ರಿಕೆಯ ಮೂಲಕ ಪತ್ರಿಕಾ ಜೀವನ ಪ್ರಾರಂಭಿಸಿದ ಅವರು ಹಲವಾರು ಕನ್ನಡ, ಮರಾಠಿ ಹಾಗೂ ಆಂಗ್ಲ ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಇಂಡಿಯನ್ ಎಕ್ಸ್ಪ್ರೇಸ್ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರಿಗೆ ಜಿಲ್ಲೆಯ ಕೆ.ಶ್ಯಾಮರಾವ ದತ್ತಿನಿಧಿ ಪ್ರಶಸ್ತಿ ದೊರಕಿದ್ದು ಈಗ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಲಭಿಸಿದ್ದಕ್ಕೆ ಅವರಿಗೆ ಹಳಿಯಾಳ ಪತ್ರಕರ್ತರ ಸಂಘ, ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಇತರ ಅನೇಕರು ಅಭಿನಂದನೆ ಸಲ್ಲಿಸಿದ್ದಾರೆ.
Leave a Comment