ಹೊನ್ನಾವರ: ಪಟ್ಟಣದ ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್.ಗೌಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ತೊಂದರೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ನೀಡಿದ್ದರು. ಈ ಕುರಿತು 9 ತಿಂಗಳಾದರು ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಇನ್ನು ಮುಂದಾದರೂ ಸಾರ್ವಜನಿಕರ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪ್ರಭಾತನಗರದ ಫಾರೆಸ್ಟ ಕಾಲೋನಿಯ ಪಿ.ಡಬ್ಲೂಡಿ ಕಾಲೋನಿಯ ಪಕ್ಕದಲ್ಲಿರುವ ಮನೆಯ ಶೌಚಾಲಯದ ಕೊಳಚೆ ನೀರು ಮನೆಯ ಹಿಂದೆ ಇರುವ ರಸ್ತೆ ಮುಖಾಂತರ ಎಲ್ಲಾ ಕಡೆ ಹರಿದು ಹೋಗಿ ತಗ್ಗು ಪ್ರದೇಶದಲ್ಲಿ ನಿಂತಿರುತ್ತದೆ. ಇದರಿಂದ ಸುತ್ತಮುತ್ತಲಿನ ಮನೆಯಲ್ಲಿ ವಾಸಿಸುವ ನಾಗರಿಕರಿಗೆ ಸೊಳ್ಳೆ ಹಾಗೂ ಇತರೆ ಕೀಟಗಳಿಂದ ತೊಂದರೆ ಉಂಟಾಗುತ್ತದೆ. ಹಾಗೂ ಮಲೀನ ನೀರಿನ ವಾಸನೆಯಿಂದ ರೋಗ ರುಜಿನಗಳು ಹರಡುತ್ತದೆ. ಮತ್ತು ಪರಿಸರ ಹಾಳಾಗುತ್ತದೆ. ಆದ್ದರಿಂದ ಈ ಭಾಗದಲ್ಲಿ ಕೂಡಲೇ ಸ್ಥಳ ಪರಿಶೀಲನೆ ಮಾಡಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
Leave a Comment