ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ ರಾಯಣ್ಣ ವೃತ್ತ, ಕಿಲ್ಲಾ ಮಾರ್ಗವಾಗಿ ವನಶ್ರೀ ವೃತ್ತದ ಮೂಲಕ ತಾಲೂಕಾ ಕಛೇರಿಯಲ್ಲಿ ಮುಕ್ತಾಯಗೊಂಡಿತು. ಒಂದು ವಾರದವರೆಗೆ ವಿವಿಧ ಕಾರ್ಯಕ್ರಮಗಳು ಈ ಉತ್ಸವದಲ್ಲಿ ಏರ್ಪಡಿಸಲಾಗಿದೆ ಕವಿಗೋಷ್ಠಿ, ವಿಜ್ಞಾನ ಪ್ರದರ್ಶನ, ಸ್ವಯಂಪ್ರೇರಿತ ಸ್ವಚ್ಛತಾ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಥೆ, ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಥೆ, ಜಾನುವಾರು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ, ಮನೆ ಮನೆ ರಂಗೋಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಉತ್ಸವದ ವೇದಿಕೆ ಕಾರ್ಯಕ್ರಮ ಡಿ 16ರಂದು ಸಾಯಂಕಾಲ 5 ಗಂಟೆಗೆ ಶ್ರೀ ಶಿವಾಜಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ತಹಶೀಲ್ದಾರ ವಿದ್ಯಾಧರ ಗುಳುಗುಳಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಹೆಸ್ಕಾಂ ಕಾರ್ಯನಿರ್ವಾಹಕ ಅಧಿಕಾರಿ ರವಿಂದ್ರ ಮೆಟಗುಡ್, ಶಿಕ್ಷಣಾಧಿಕಾರಿ ಸಮೀರ ಮುಲ್ಲಾ ನದಾಫ, ಜೀಜಾ ಮಾತಾ ಸಂಘದ ಮಂಗಲಾ ಕಶೀಲಕರ, ಜಯ ಕರ್ನಾಟಕ ಸಂಘಟನೆಯ ವಿಲಾಸ ಕಣಗಲಿ, ಕರವೆಯ ಬಸು ಬೆಂಡಿಗೇರಿಮಠ, ಹಿರಿಯ ನಾಗರಿಕ ವೇದಿಕೆ, ಆರೋಗ್ಯ ಇಲಾಖೆ, ಎನ್.ಎಸ್.ಎಸ್.ವಿದ್ಯಾರ್ಥಿಗಳು ಇತರರು ಇದ್ದರು.
Leave a Comment