ಕಾರವಾರ: ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು ಎಂದು ಅಮದಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಸತ್ಯನಾರಾಯಣ ಪಡ್ತಿ ಹೇಳಿದರು.
ಅಮದಳ್ಳಿಯ ಪಂಚಾಯತ ಸಭಾಭವನದಲ್ಲಿ ನೆಹರು ಯುವ ಕೇಂದ್ರ, ತಾಲೂಕಾ ಯುವ ಒಕ್ಕೂಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಾಚಿದೇವ ಯುವಕ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಏಡ್ಸ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಶೇಷ ಉಪನ್ಯಾಸ ನೀಡಿದ ಅಮದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿತೀನ ಹೊಸಮಿಲಕರ್, ರೋಗ ಹರಡುವ ವಿಧಾನಗಳ ಬಗ್ಗೆ ವಿವರಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ರೇಖಾ ತೆಂಡೂಲ್ಕರ, ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಮೀರಾ ನಾಯ್ಕ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಸಪ್ನಾ ನಾಯ್ಕ, ಮಾಚಿದೇವ ಯುವಕ ಸಂಘದ ಕಾರ್ಯದರ್ಶಿ ಅಭಿಷೇಕ ಮಡಿವಾಳ, ಜಿಲ್ಲಾ ಪ್ರಶಸ್ತಿ ವಿಜೇತ ಮಂಜುನಾಥ ಮುದ್ಗೇಕರ ಇದ್ದರು. ತಾಲೂಕ ಪಂಚಾಯತ ಸಾಮಾಜಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು.
ಜ್ಯೋತಿ ದೆವಳಿ ನಿರ್ವಹಿಸಿದರು. ರಾಜೇಶ ಮಡಿವಾಳ ವಂದಿಸಿದರು.
Leave a Comment