ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ. ದಿ. 5ರ ಒಳಗೆ ಖುದ್ದಾಗಿ ಜಿಲ್ಲಾಧಿಕಾರಿಯವರು ಬಂದು ತಮ್ಮ ಬೇಡಿಕೆ ಈಡೇರಿಸದೆ ಇದ್ದರೇ ಡಿ.7 ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯ ಪತ್ರವನ್ನು ಕಬ್ಬು ಬೆಳೆಗಾರ ಸಂಘದವರು ಜಿಲ್ಲಾಧಿಕಾರಿಗಳಿಗೆ ದಿ.1 ರಂದೆ ರವಾನಿಸಿದ್ದರು. ಮಂಗಳವಾರ ಹಳಿಯಾಳಕ್ಕೆ ಆಗಮಿಸಿದ್ದ ಉಪ ವಿಭಾಗಾಧಿಕಾರಿ(ಎಸಿ) ಶಿವಾನಂದ ಕರಾಳಿ ಅವರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳು ಕಾರ್ಯಕ್ರಮಗಳಲ್ಲಿ ನಿರತರಾಗಿದ್ದು ಡಿ.10 ರಂದು ಹಳಿಯಾಳಕ್ಕೆ ಆಗಮಿಸಿ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆ ಆಡಳಿತದವರ ವಿಶೇಷ ಸಭೆ ನಡೆಸಿ ಬೆಳೆಗಾರರಿಗೆ ನ್ಯಾಯ ಒದಗಿಸಲಾಗುವುದೆಂದು ಭರವಸೆ ನೀಡಿದ್ದಾರೆಂದು ತಿಳಿಸಿದ್ದು ಪ್ರತಿಭಟನೆಯ ನಿರ್ಧಾರ ಹಿಂಪಡೆಯುವಂತೆ ಕೊರಿದ ಕಾರಣ ಪ್ರತಿಭಟನೆಯ ನಿರ್ಧಾರ ಹಿಂಪಡೆಯಲಾಗಿದ್ದು ಜಿಲ್ಲಾಧಿಕಾರಿ ಆ ಸಂದರ್ಭದಲ್ಲೂ ರೈತರಿಗೆ ನ್ಯಾಯ ಒದಗಿಸದೆ ಇದ್ದರೇ ಜಿಲ್ಲಾಡಳಿತ ಹಾಗೂ ಕಾರ್ಖಾನೆಯ ವಿರುದ್ದ ಊಗ್ರ ಹೋರಾಟ ನಡೆಸಿಯೇ ತಿರುತ್ತೇವೆ ಎಂದು ಹಳಿಯಾಳ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹಾಗೂ ಪ್ರಧಾನ ಕಾರ್ಯದರ್ಶಿ ಅಶೋಕ ಮೇಟಿ ತಿಳಿಸಿದ್ದಾರೆ.
Leave a Comment