ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಂಗಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಪ್ರಾಧ್ಯಾಪಕಿ ಗೀತಾ ನಾಯಕ, ವರ್ತನೆ ಪರಿವರ್ತನೆ ಮಾಡುವ ಸಂಸ್ಕಾರದ ಶಿಕ್ಷಣ ಅವಷ್ಯವಾಗಿದೆ ಎಂದರು. ಕೊಂಕಣ ಸಂಸ್ಥೆಯಲ್ಲಿ ಮುಖ್ಯಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದ ಎಂ.ಎಂ.ಹೆಗಡೆ ಹೊಲನಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಜಯಶ್ರೀ ಕಾಮತ ವೇದಿಕೆಯಲ್ಲಿದ್ದರು. ಸರಸ್ವತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಲೋಚನಾ ರಾವ್, ಮುಖ್ಯಾಧ್ಯಾಪಕಿ ಸುಮಾ ಪ್ರಭು, ಸುಜಾತ ನಾಯ್ಕ, ಸಾವಿತ್ರಿ ಹೆಗಡೆ, ಲೀಲಾವತಿ ನಾಯ್ಕ, ಆರ್.ಎಚ್.ದೇಶಭಂಡಾರಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸಿ.ಎನ್.ಧನ್ಯಾ, ನಯನಾ ನಾಯ್ಕ ಹಾಗೂ ಕೆ.ಜಿ.ಅನುಷಾ ಇವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನದ ಸಜ್ಜನಿ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಟ್ರಸ್ಟ್ನ ಗೌರವ ಕಾರ್ಯದರ್ಶಿ ಮುರಲೀಧರ ಪ್ರಭು ಪ್ರಸ್ತಾಪಿಸಿದರು. ಶಿಕ್ಷಕಿ ಅನಿತಾ ಪಟಗಾರ, ಶಿಕ್ಷಕ ಪ್ರಕಾಶ ಗಾವಡಿ ನಿರ್ವಹಿಸಿದರು. ಡಿ.ಡಿ.ಕಾಮತ ವಂದಿಸಿದರು.
Leave a Comment