ಕಾರವಾರ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾಧಿಗಳ ಸಂಘ, ಮಾನವ ಹಕ್ಕುಗಳ ಮತ್ತು ಗ್ರಾಹಕರ ಹಕ್ಕುಗಳ ಸಂಸ್ಥೆ ಉ.ಕ ರವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ 21 ರಂದು ಬೆಳಗ್ಗೆ 10.30ಕ್ಕೆ ನಗರದ ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್. ಧಾರವಾಡಕರ ಕಾರ್ಯಕ್ರಮ ಉದ್ಘಾಟಿಸುವರು. ಮಾನವ ಹಕ್ಕುಗಳ ಮತ್ತು ಗ್ರಾಹಕ ಹಕ್ಕುಗಳ ಸಂಸ್ಥೆ ಅಧ್ಯಕ್ಷ ವಿವೇಕ ವಿ.ಬಾಂದೇಕರ ಅಧ್ಯಕ್ಷತೆ ವಹಿಸುವರು.
Leave a Comment