ಕಾರವಾರ: ಅತ್ಯುನ್ನತ ಸೇವೆ ಹಾಗೂ ಸಾಧನೆಗೈದ ರಾಜ್ಯ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ನಾಮ ನಿರ್ದೇಶನಕ್ಕಾಗಿ ಅರ್ಜಿ ಆವ್ಹಾನಿಸಲಾಗಿದೆ.
ಜಿಲ್ಲಾವಾರು ಪ್ರಶಸ್ತಿ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇಬ್ಬರು ಗಣ್ಯವ್ಯಕ್ತಿಗಳು ಮತ್ತು ಜಿಲ್ಲಾ ನೌಕರರ ಸಂಘದ ಅಧ್ಯಕ್ಷರನ್ನೊಳಗೊಂಡಂತೆ ಮೌಲ್ಯ ಮಾಪನ ಸಮಿತಿಯನ್ನು ರಚಿಸಲಾಗಿದೆ. ಅಖಿಲಭಾರತ ಸೇವೆಗಳ ಅಧಿಕಾರಿಗಳನ್ನು ಹೊರತು ಪಡಿಸಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಎ.ಬಿ.ಸಿ.ಡಿ ವರ್ಗದ ಅಧಿಕಾರಿ/ಸಿಬ್ಬಂದಿಗಳನ್ನು ಆಯ್ಕೆ ಮಾಡಿ ಜನವರಿ 6 ರಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಮ ನಿರ್ದೇಶನವನ್ನು ಜನವರಿ 26 ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment