ಹೊನ್ನಾವರ :
ವಾಯುವ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾಗಿರುವ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಇನ್ನೂ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಯಲಗುಪ್ಪಾ ಕ್ರಾಸ್ ಬಳಿ ರವಿವಾರ ಸಂಭವಿಸಿದೆ.
ಕಾರವಾರದಿಂದ ಚಿಕ್ಕಮಗಳೂರಿಗೆ ಹೊರಟ್ಟಿದ್ದ ಏಂ 31 ಈ1229 ಎಂಬ ಸಂಖ್ಯೆಯ ಬಸ್ ಏಕಾಏಕಿ ಪಲ್ಟಿಯಾಗಿದ್ದು, ಈ ಬಸ್ ಕಾರವಾರ ಡಿಪೋಗೆ ಸೇರಿದ್ದಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹೊನ್ನಾವರದ ತಾಲೂಕಾ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ ತಾಯಿ ಮಗುವಿಗೆ ತಲೆಗೆ ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಪೋಲಿಸ್ ಕ್ವಾಟ್ರಸ್ ನಿವಾಸಿಯಾದ ಎಂ ಸಂಗೀತ ಲಿಂಗಯ್ಯ (30), ಹಾಗೂ ಹುಬ್ಬಳ್ಳಿ ಮಂಗಳವಾರ ಪೇಟೆ ನಿವಾಸಿಯಾದ ಪ್ರೀತಮ್ ಸಿದ್ಧಲಿಂಗಪ್ಪ (09) ಎಂದು ತಿಳಿದುಬಂದಿದೆ.
ಬಸ್ ಚಾಲಕರ ನಿಯಂತ್ರಣ ತಪ್ಪಿದೇ ಈ ಅವಘಡಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಬಸ್ ಚಾಲಕನ ವಿರುದ್ಧ ಹೊನ್ನಾವರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Leave a Comment