ಹಳಿಯಾಳ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು. ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ ಭೇದಿಸುವಲ್ಲಿ ಹಾಗೂ ಆರೋಪಿಗಳನ್ನು ಬಂಧಿಸುವಲ್ಲಿ ಪೋಲಿಸರು ವಿಫಲರಾಗಿದ್ದಾರೆ ಇದೊಂದು ಅಮಾನವೀಯ ಸಮಾಜ ತಲೆತಗ್ಗಿಸುವಂತಹ ದುಷ್ಕøತ್ಯವಾಗಿದೆ ಎಂದು ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿರುವ ಸಂಘಟನೆಯವರು ಸಮಾಜದಲ್ಲಿ ದಲಿತರ ಮೇಲೆ ದಬ್ಬಾಳಿಕೆಗಳು, ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿದ್ದರೂ ಸಹ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ, ಕಾನೂನು ಸುವ್ಯವಸ್ಥೆ ಹಾಳಾಗಿದೆ , ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ, ಒರ್ವರಿಗೆ ಸರ್ಕಾರಿ ನೌಕರಿ ಮತ್ತು ಕೃಷಿ ಜಮೀನು ನೀಡುವುದರೊಂದಿಗೆ ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ಸಲ್ಲಿಸುವಾಗ ಸಂಘಟನೆಯ ಆಕಾಶ ತಳವಾರ, ರಾಮ ಚಲವಾದಿ, ಫಕೀರಪ್ಪಾ ಕೆರವಾಡ, ಭರಮಾಜಿ, ಷಣ್ಮುಖ ಚಲವಾದಿ, ಮಾರುತಿ ಕುರಿಯಾರ, ಯಲ್ಲಪ್ಪಾ ಹೊನ್ನೊಜಿ, ಹನುಮಂತ ಚಲವಾದಿ, ಕುಮಾರ ಕಲಬಾವಿ, ಶಿವು, ವಿಠ್ಠಲ, ಸುಭಾಷ ಕೊಲಕಾರ, ಪ್ರವೀಣ, ರಾಯಪ್ಪಾ, ವೀರಭದ್ರ ಸೇರಿದಂತೆ ಮೊದಲಾದವರು ಇದ್ದರು.
Leave a Comment