• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸೂಕ್ತ ವೇದಿಕೆ

January 8, 2018 by Gaju Gokarna Leave a Comment

ಅಂಕೋಲಾ, ತಾಲೂಕಿನ ಮಾದನಗೇರಿಯ ಬಳಲೆಯ ಅಪೂರ್ವ ಎಜ್ಯುಕೇಶನ್ ಸೊಸೈಟಿಯ ವಾರ್ಷಿಕ ಸ್ನೇಹ ಸಮ್ಮೇಳನವು ಅಪೂರ್ವ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಅಂಕೋಲಾ ತಾಲೂಕಿನ ತಾಲೂಕ ಪಂಚಾಯತದ ಅಧ್ಯಕ್ಷರಾದ ಸುಜಾತ ಗಾಂವಕರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವಾರ್ಷಿಕೋತ್ಸವ ಕಾರ್ಯಕ್ರಮಗಳು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಒಂದು ವೇದಿಕೆಯಾಗಿದ್ದು ಅವರ ಸುಪ್ತ ಪ್ರತಿಭೆಗಳು ಇಲ್ಲಿ ಅನಾವರಣಗೊಳ್ಳುತ್ತವೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಮಾತನಾಡಿ ವರ್ಷಪೂರ್ತಿ ಶಾಲೆಗಳಲ್ಲಿ ಪಠ್ಯದೊಂದಿಗೆ ಹಲವು ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು ಕೊನೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಂಡು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಗುತ್ತದೆ. ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಈ ದಿನ ವಿದ್ಯಾರ್ಥಿಗಳಿಗೆ ವಿಶೇಷ ಹಾಗೂ ಸಂಭ್ರಮದ ದಿನವಾಗಿದೆ. ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಆ ಪ್ರತಿಭೆಗಳು ಹೊರ ಬರಬೇಕಾದರೆ ಸೂಕ್ತ ವೇದಿಕೆ ಹಾಗೂ ಮಾರ್ಗದರ್ಶನದ ಅಗತ್ಯತೆ ಇದೆ. ಪಾಲಕರು ಮಕ್ಕಳ ಆಸಕ್ತಿಯನ್ನು ಅರಿತು ಅವರಿಗೆ ಆಸಕ್ತಿಯುಳ್ಳ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೋತ್ಸಾಹಿಸಬೇಕೇ ವಿನಹ ತಮ್ಮ ಒತ್ತಡವನ್ನು ಮಕ್ಕಳ ಮೇಲೆ ಹೇರಬಾರದು. ಭವಿಷ್ಯದಲ್ಲಿ ಮಕ್ಕಳು ಯಾವ ಕ್ಷೇತ್ರದಲ್ಲಿ ಮುಂದುವರಿಯಬೇಕು ಎನ್ನುವುದನ್ನು ಪಾಲಕರು ನಿರ್ಧರಿಸದೇ ಮಕ್ಕಳ ಭವಿಷ್ಯದ ಆಯ್ಕೆಯನ್ನು ಅವರಿಗೇ ಬಿಡಬೇಕು. ಕಠಿಣ ಪರಿಶ್ರಮ, ಸತತ ಅಭ್ಯಾಸದ ಮೂಲಕ ವಿದ್ಯಾರ್ಥಿಗಳು ಮುನ್ನಡೆದರೆ ಖಂಡಿತವಾಗಿಯೂ ನಿಮಗೆ ಯಶಸ್ಸು ಲಭಿಸುತ್ತದೆ. ಪ್ರಯತ್ನಕ್ಕೆ ತಕ್ಕ ಫಲ ದೊರೆಯುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾದನಗೇರಿಯ ಮಹಾಲಸ ಸಿದ್ಧಿವಿನಾಯಕ ಟ್ರಸ್ಟ್ ನ ಅಧ್ಯಕ್ಷ ಸುನೀಲ ಪೈ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಪಠ್ಯೇತರ ಚಟುವಟಿಕೆಗಳು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಅರುಣ ನಾಡಕರ್ಣಿ, ಸತೀಶ ಗೌಡ, ಮಾಲಿನಿ ಎಂ. ನಾಯಕ, ದಿನೇಶ ತಲಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Ankola, Honavar News Tagged With: ಅತಿಥಿಗಳಾಗಿ ಆಗಮಿಸಿದ, ಅನಾವರಣ, ಅಪೂರ್ವ, ಎಜ್ಯುಕೇಶನ್ ಸೊಸೈಟಿಯ, ಪ್ರತಿಭೆಗಳ, ಬಿಜೆಪಿ ಪ್ರಮುಖರು, ವಾರ್ಷಿಕ ಸ್ನೇಹ, ವಾರ್ಷಿಕೋತ್ಸವಗಳು, ಸೂಕ್ತ ವೇದಿಕೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar