• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ

January 16, 2018 by Sachin Hegde Leave a Comment

ಹಳಿಯಾಳ: ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವನ್ನಪ್ಪಿದ್ದು  ಕೂಡಲೇ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ನೊಂದ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು, ವಿವಿಧ ಸಂಘಟನೆಯವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೇರವಣಿಗೆ ನಡೆಸಿದ ಮೃತಳ ತಂದೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ.  ಮೃತಳ ತಂದೆ ಮಹಮ್ಮದ ಯುಸೂಫ್ ಹುಬ್ಬಳ್ಳಿವಾಲೆ, ಮೃತಳ ಗಂಡ ಗೌಸಮೊದಿನ ಅತ್ತಾರ ಹಾಗೂ ಕುಟುಂಬ ವರ್ಗದವರು ಮುಸ್ಲಿಂ ಸಮಾಜ, ದಲಿತ ಸಂಘರ್ಷ ಸಮೀತಿ, ಮಹಿಳಾ ಸಂಘಟನೆ, ಜಯ ಕರ್ನಾಟಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೌನ ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಾರ್ಯಾಲಯಕ್ಕೆ ಆಗಮಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳ ಹೆಸರಿನಲ್ಲಿದ್ದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.    ಮನವಿಯಲ್ಲಿ :- ಪಟ್ಟಣದ ಚವ್ವಾಣ ಪ್ಲಾಟನ ನಿವಾಸಿಗಳಾದ ನಾವು ತೀರಾ ಬಡವರಾಗಿದ್ದು ನನ್ನ ಮಗಳಾದ ಬಿಬಿಆಯೇಷಾ ಗೌಸಮೊದಿನ ಅತ್ತಾರ 2ನೇ ಹೆರಿಗೆಗೆಂದು ದಿ.8 ರಂದು ದಾಖಲಾದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಹಾಗೂ ಸಿಬ್ಬಂದಿಗಳು ನೀರ್ಲಕ್ಷ್ಯತನ ತೊರಿಸಿದ್ದರಿಂದ ತೀವೃ ರಕ್ತಸ್ರಾವವಾಗುತ್ತಿರುವುದನ್ನು ಕಂಡ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‍ಗೆ ದಾಖಲಾಗುವಂತೆ ತಿಳಿಸಿದ್ದು ಅಂದು ಕಿಮ್ಸ್‍ಗೆ ದಾಖಲಾದ ಆಯೇಷಾ ಚಿಕಿತ್ಸೆ ಫಲಿಸದೆ ದಿ.13 ರ ರಂದು ಸಾವನ್ನಪ್ಪಿದ್ದಾಳೆಂದು ವಿವರವಾಗಿ ತಿಳಿಸಿರುವ ಅವರು ಹಳಿಯಾಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ಖಂಡಿಸಿ ಮೃತಳ ಶವವನ್ನು ಹಳಿಯಾಳ ಆಸ್ಪತ್ರೆಯ ಎದುರು ಇಟ್ಟುಕೊಂಡು ಶನಿವಾರ ರಾತ್ರಿ  ಪ್ರತಿಭಟನೆ ನಡೆಸಿ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಕರ್ತವ್ಯದಲ್ಲಿದ್ದ ತಾಲೂಕಾ ವೈದ್ಯಾಧಿಕಾರಿ ಡಾ.ರಮೇಶ ಕದಂ ಅವರನ್ನು ಆಗ್ರಹಿಸಿದಾಗ ಅವರು 2 ದಿನಗಳ ಒಳಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದಾಗ ಪ್ರತಿಭಟನೆ ಹಿಂಪಡೆಯಲಾಗಿತ್ತು ಆದರೇ ಈವರೆಗೆ  ಯಾವುದೇ ತನಿಖೆ ನಡೆಸಿಲ್ಲ ಎಂದು ಆರೋಪಿಸಲಾಗಿದೆ.    ವೈದ್ಯರ ಹಾಗೂ ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದಲೇ ತಮ್ಮ ಮಗಳು ಸಾವಿಗಿಡಾಗಿದ್ದು ಅವಳಿಗೆ ಜನಿಸಿದ ಗಂಡುಮಗು ಅನಾಥವಾಗಿದ್ದು ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.  ಇನ್ನೂ ಈ ಸರ್ಕಾರಿ ಆಸ್ಪತ್ರೆಯು ಹೆಸರಿಗಷ್ಟೇ ಆಸ್ಪತ್ರೆಯಾಗಿದ್ದು ಯಾವುದೇ ಕನಿಷ್ಠ ಸೌಲಭ್ಯಗಳಿಲ್ಲ, ನುರಿತ, ತಜ್ಞ ವೈದ್ಯರ, ಸಿಬ್ಬಂದಿಗಳ ಕೊರತೆ ಇದ್ದು ವೈದ್ಯರು ತಮ್ಮ ಖಾಸಗಿ ಆಸ್ಪತ್ರೆಗಳನ್ನೆ ನೆಚ್ಚಿಕೊಂಡಿದ್ದು ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳು ಹಾಗೂ ಸಚಿವರು ಮತ್ತು ಸರ್ಕಾರ ಕ್ರಮ ಕೈಗೊಂಡು ಅಮಾಯಕ ಜೀವಗಳು ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆಗ್ರಹಿಸಲಾಗಿದೆ. ಅಲ್ಲದೇ ಒಂದು ವಾರದ ಒಳಗೆ ಸೂಕ್ತ ತನಿಖೆ ನಡೆದು ಕ್ರಮ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದೆ ಇದ್ದಲ್ಲಿ ಊಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಮನವಿಯ ಪ್ರತಿಗಳನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಆರೋಗ್ಯ ಸಚಿವ ರಮೇಶಕುಮಾರ, ವಿಪ ಸದಸ್ಯ ಎಸ್.ಎಲ್.ಘೊಟ್ನೆಕರ ಅವರಿಗೂ ರವಾನಿಸಲಾಗಿದೆ.  ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ಫಯಾಜ ಶೇಖ, ಸುರೇಶ ತಳವಾರ, ಮುಖಂಡರಾದ ಅಲಿಮ, ಅಜರ ಬಸರಿಕಟ್ಟಿ, ಇಮ್ರಾನ ಶೇಖ,  ಸಮೀರ ಹುಬ್ಬಳ್ಳಿವಾಲೆ, ಪೀರಾ ಮಕಾನದಾರ, ರಾಜು ಮುಲ್ಲಾ, ಅನ್ನಪ್ಪಾ ವಡ್ಡರ, ಗುಲಾಬಷಾ ಲತಿಫನವರ, ಶಬಾನಾ ದಲಾಲ, ರೇಷ್ಮಾ ಮನಿಯಾರ, ರಿಯಾಜಮ್ಮದ ಇಟ್ಟಂಗಿವಾಲೆ, ಮುಫ್ತಿ ಫಯಾಜಅಮ್ಮದ, ಮಸ್ತಾನ ಮುನವಳ್ಳಿ ಸೇರಿದಂತೆ ಮಹಿಳೆಯರು ಅನೇಕರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ, ಬಾಣಂತಿ ಸಾವು, ಮನವಿ, ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ, ಸರ್ಕಾರಿ ಆಸ್ಪತ್ರೆ, ಹೆರಿಗೆ ಮಾಡಿಸುವ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar