ಹಳಿಯಾಳ:
01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ಹಿಂದೆ ಇದ್ದಂತೆ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕ.ರಾ.ಸ.ಎನ್.ಪಿ.ಎಸ್. ನೌಕರರ ಸಂಘವು ಬೆಂಗಳೂರಿನ ‘ಫ್ರೀಡಂಪಾರ್ಕ್ ಚಲೋ’ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದು ರಾಜ್ಯದ 1,96,000 ಎನ್.ಪಿ.ಎಸ್. ನೌಕರರು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದು ಉತ್ತರ ಕನ್ನಡ ಜಿಲ್ಲೆ ಹಳಿಯಾಳದಿಂದ ಕೂಡ ಸಾವಿರಾರು ಸಂಖ್ಯೆಯಲ್ಲಿ ನೌಕರರು ತೆರಳುತ್ತಿರುವುದಾಗಿ ಹೇಳಿದರು.
Leave a Comment