ಹೊನ್ನಾವರ :
ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಪ್ರಭಾತನಗರದಲ್ಲಿರುವ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಯೋಗೇಶ ರಾಯ್ಕರ ತಿಳಿಸಿದರು. ಅವರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕನ ಸಭಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಮಂಕಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸುವರು, ಕೇಂದ್ರ ಸರ್ಕಾರದ ಮಾನ್ಯ ಕೌಶಲ್ಯಾಭಿವೃದ್ಧಿ ಸಚಿವರು ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ ಇವರು ಬ್ಯಾಂಕನ ಸುವರ್ಣ ಪ್ರಭ ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ ಅಧ್ಯಕ್ಷ ಕೆ. ಷಡಕ್ಷರಿ ಇವರು ಸುವರ್ಣ ಮಹೋತ್ಸವ ಹಬ್ಬದ ಉದ್ಘಾಟನೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊನ್ನಾವರ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಯೋಗೇಶ ಆರ್. ರಾಯ್ಕರ್ ಉಪ್ಪೋಣಿ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಾಸಕ ಮಂಕಾಳ ಎಸ್. ವೈದ್ಯ, ಶಾಸಕಿ ಶಾರದಾ ಮೋಹನ ಶೆಟ್ಟಿ, ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ಬೆಂಗಳೂರು ಉಪಾಧ್ಯಕ್ಷ ಈಶ್ವರ ನಾರಾಯಣ ನಾಯ್ಕ, ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಜಿ.ಪಂ. ಅಧ್ಯಕ್ಷೆ ಜಯಶ್ರೀ ಮೊಗೇರ ಮುಖ್ಯ ಅಥಿತಿಗಳಾಗಿ ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ವ್ಯವಸ್ಥಾಪಕ ನಿರ್ದೇಶಕ ಎ.ಸಿ. ದಿವಾಕರ, ಸಹಕಾರಿ ಸಂಘಗಳ ಜಂಟಿ ನಿಬಂಧಕ ಎಂ.ಡಿ. ಮಲ್ಲೂರ, ಸಹಕಾರಿ ಸಂಘಗಳ ಉಪ ನಿಬಂಧಕ ಜಿ.ಎಸ್. ಜಯಪ್ರಕಾಶ, ಡಿ.ಡಿ.ಎಂ. ನಬಾರ್ಡ ಎಸ್.ಎಲ್. ಯೋಗೇಶ, ಉಪನಿರ್ದೇಶಕ ಲೆಕ್ಕಪರಿಶೋಧನೆ ಉ.ಕ ಮಂಜುನಾಥ ಹೆಗಡೆ, ತಾ.ಪಂ. ಅಧ್ಯಕ್ಷ ಉಲ್ಲಾಸ ಈಶ್ವರ ನಾಯ್ಕ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಉಪವಿಭಾಗ ಪಿ.ಎನ್. ನಾಯ್ಕ, ಪ.ಪಂ. ಅಧ್ಯಕ್ಷೆ ರಾಜಶ್ರೀ ಬಾಲಚಂದ್ರ ನಾಯ್ಕ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕøತ ಆರ್. ಎಸ್ ಭಾಗ್ವತ, ಕುಮಟಾ ಇವರು ಪಾಲ್ಗೊಳ್ಳುವರು, ಮಧ್ಯಾಹ್ನ ಸಹಕಾರಿ ಸಂಘದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಸಂಜೆ 4 ಗಂಟೆಯಿಂದ ಗಣಪತಿ ಹೆಗಡೆ ತೋಟಿ ಇವರ ತಂಡದಿಂದ ಯಕ್ಷಗಾನ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ರಾಮಪ್ಪ ಗಣಪತಿ ನಾಯ್ಕ, ನಿರ್ದೇಶಕರಾದ ಸತೀಶ ಮಂಜುನಾಥ ತಾಂಡೇಲ, ಶಿವರಾಮ ಕೃಷ್ಣ ಸಂಗೂಮನೆ, ಟಿ.ಎಸ್. ಹೆಗಡೆ, ಗಣಪಯ್ಯ ಮಂಜು ಗೌಡ, ಪ್ರಧಾನ ವ್ಯವಸ್ಥಾಪಕ ಪಿ.ಎನ್. ಭಟ್ ಉಪಸ್ಥಿತರಿದ್ದರು.
Leave a Comment