ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ. ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್ಕರಿಮ ಅಬ್ದುಲ್ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ ಈ ದುಷ್ಕøತ್ಯ ನಡೆಸಿದ್ದಾನೆಂದು ಹೇಳಲಾಗಿದೆ.
ಘಟನೆ ವಿವರ :- ಶನಿವಾರ ಸಂಜೆ ಪಟ್ಟಣದ ಮಿಲಾಗ್ರಿಸ್ ಚರ್ಚ ಬಳಿ ತೆರಳಿದ್ದ ಆರೋಪಿ ಬಾಲಕಿಯನ್ನು ವಿಳಾಸ ಕೇಳುವ ನೆಪದಿಂದ ಮಾತನಾಡಿಸಿ ಅಪಹರಣ ಮಾಡಿಕೊಂಡು ತನ್ನ ರೀಕ್ಷಾದಲ್ಲಿ ಹಾಕಿಕೊಂಡು ಧಾರವಾಡ ರಸ್ತೆಗೆ ಹೊರಟು ಪಟ್ಟಣದಿಂದ 5 ಕೀಮಿ ದೂರದಲ್ಲಿ ಹೊಗಿ ಅರಣ್ಯದ ಕಚ್ಚಾ ರಸ್ತೆಯಲ್ಲಿ ಓಳಗೆ ರೀಕ್ಷಾ ಒಯ್ದು ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಆ ಸಂದರ್ಭದಲ್ಲಿ ಧೈರ್ಯದಿಂದ ಕಾಮುಕನನ್ನು ಎದುರಿಸಿದ ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಆತನಿಂದ ತಪ್ಪಿಸಿಕೊಂಡು ಬಂದು ಮುಖ್ಯ ರಸ್ತೆಯ ಬಳಿ ಬಂದು ನಿಂತು ಸಾಗುತ್ತಿದ್ದ ವಾಹನಗಳಿಗೆ ಕೈಮಾಡಿದರು ಸುಮಾರು ಹೊತ್ತು ಯಾರು ವಾಹನ ನಿಲ್ಲಿಸಿಲ್ಲ ಆ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೇರಳುತ್ತಿದ್ದ ಪೋಲಿಸ್ ಪೆದೆಗಳಾದ ಅಶೋಕ ಹುಬ್ಬಳ್ಳಿ ಮತ್ತು ಮಾಹಾಂತೇಶ ಬಾರ್ಕೆರ ಅವರು ಬಾಲಕಿಯನ್ನು ವಿಚಾರಿಸಿದಾಗ ಬಾಲಕಿ ನೀಡಿದ ಮಾಹಿತಿ ಆಧರಿಸಿ ಅರಣ್ಯ ಹೊಕ್ಕಿದ ಇರ್ವರು ಪೊಲಿಸರು ಪರಾರಿಯಾಗುತ್ತಿದ್ದ ಅಬ್ದುಲ್ ಕರೀಮ್ನನ್ನು ಹಿಂಬಾಲಿಸಿ ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಬಾಲಕಿ ಕ್ರೈಸ್ತ ಸಮುದಾಯಕ್ಕೆ ಸೇರಿದವಳಾಗಿದ್ದು ಘಟನೆಯ ಬಗ್ಗೆ ಪಟ್ಟಣದಲ್ಲಿ ತಿಳಿಯುತ್ತಿದ್ದಂತೆ ಕ್ರೈಸ್ತ ಸಮಾಜ ಸೇರಿದಂತೆ ಎಲ್ಲ ಸಮಾಜಗಳ ಮಹಿಳೆಯರು, ಸಾರ್ವಜನಿಕರು, ಯುವಕರು ನೂರಾರು ಸಂಖ್ಯೆಯಲ್ಲಿ ಠಾಣೆಯ ಎದುರು ಜಮಾಯಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ದಾಂಡೇಲಿ ಸಿಪಿಐ ಅನೀಸ್ ಮುಜಾವರ ಹಳಿಯಾಳ ಠಾಣೆಗೆ ಆಗಮಿಸಿ ಮಾಹಿತಿ ಪಡೆದು ಆರೋಪಿಯ ವಿಚಾರಣೆ ನಡೆಸಿದರು. ಪಿಎಸ್ಐ ಹೂಗಾರ್ ಆರೋಪಿ ಅಬ್ದುಲ್ಕರೀಮ್ ವಿರುದ್ದ ಅಪಹರಣ ಹಾಗೂ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ದುಷ್ಕರ್ಮಿ ಕೃತ್ಯಕ್ಕೆ ಬಳಸಿದ್ದ ಆಟೋ ಕೆಎ 25 ಎ6524 ಅನ್ನು ವಶಕ್ಕೆ ಪಡೆಯಲಾಗಿದೆ. ದುಷ್ಕರ್ಮಿಯಿಂದ ತಪ್ಪಿಸಿಕೊಂಡು ಬಂದ ಬಾಲಕಿ ಮುಖ್ಯ ರಸ್ತೆಯ ಬಳಿ ಅಳುತ್ತ ನಿಂತು ವಾಹನ ನಿಲ್ಲಿಸುವಂತೆ ಕೈ ಮಾಡುವಾಗ ಸಾಕಷ್ಟು ವಾಹನಗಳು ಸಾಗಿದರು ಯಾರು ವಾಹನ ನಿಲ್ಲಿಸಿ ಬಾಲಕಿಯ ಸಮಸ್ಯೆ ಕೇಳುವ ಮಾನವೀಯತೆ, ಸೌಜನ್ಯ ತೊರದೆ ಇರುವುದು ಪೋಲಿಸರ ಹಾಗೂ ಸಾರ್ವಜನೀಕರ ಅಸಮಾಧಾಕ್ಕೆ ಕಾರಣವಾಗಿದೆ.
Leave a Comment