ಹಳಿಯಾಳ : ಹಳಿಯಾಳದ ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಬೆಂಗಳೂರಿನ ನಡೆದ ಕಾರ್ಯಕ್ರಮದಲ್ಲಿ 2017 ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇವರೊಂದಿಗೆ 44 ಇತರ ಪತ್ರಕರ್ತರಿಗೆ ಕೂಡ ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಅಂಕಣಕಾರರಾದ ಡಾ. ಬರಗೂರು ರಾಮಚಂದ್ರಪ್ಪ ರವರಗೆ ತಳ ಸಮುದಾಯದ ಬಗೆಗಿನ ‘ ಡಾ. ಬಿ.ಆರ್. ಅಂಬೇಡ್ಕರ ಮೂಕ ನಾಯಕ ಪ್ರಶಸ್ತಿ 2017 ‘ ಕೂಡ ನೀಡಲಾಯಿತು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಾದ ಡಾ. ಪಿ. ಎಸ್. ಹರ್ಷ, ಅಕಾಡೆಮಿಯ ಅದ್ಯಕ್ಷ ಎಮ್. ಸಿದ್ದರಾಜು ಹಾಗೂ ಇತರರು ಉಪಸ್ಥಿತರಿದ್ದರು.
Leave a Comment