• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಸಂಪನ್ನ

February 8, 2018 by Sachin Hegde Leave a Comment

ಹೊನ್ನಾವರ: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತೀ ತೀರ್ಥಮಹಾಸ್ವಾಮಿಗಳ ದಿವ್ಯ ಅನುಗ್ರಹದೊಂದಿಗೆ ತಾಲೂಕಿನ ಬಳ್ಕೂರಿನ ಶ್ರೀ ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಹಾಗೂ ನೀಲಗೋಡ ಉತ್ಸವ ನಡೆಯಿತು. ಕೇವಲ ಕೆಲವೇ ವರ್ಷಗಳಲ್ಲಿ ರಾಜ್ಯ ಹೊರ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ದಿಯನ್ನು ಪಡೆದಿರುವ ನೀಲಗೋಡ ಕ್ಷೇತ್ರದಲ್ಲಿ 4 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸಹಸ್ರ ಚಂಡಿಕಾಯಾಗದಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದರು.

ಪರಮ ಪೂಜ್ಯನೀಯ ಶ್ರೀ ಶ್ರೀ ರಾಮಾನಂದ ಅವಧೂತ ಮಹಸ್ವಾಮಿಗಳು ದೀವಗಿಯವರ ಸಂಕಲ್ಪದಂತೆ ಅವರ ದಿವ್ಯ ಉಪಸ್ದಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಹಸ್ರ ಚಂಡಿಕಾಯಾಗ ನಡೆಯಿತು. ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಶ್ರೀ ಮಾರುತಿ ಗುರುಜಿಯವರಿಂದ ಆರ್ಶಿವಚನ ನಡೆಯಿತು. ನೀಲಗೋಡ ಕ್ಷೇತ್ರದ ಪ್ರಧಾನ ಅರ್ಚಕ ಮಾದೇವ ಸ್ವಾಮಿಯವರ ನೇತ್ರತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ವಾರ್ಷಿಕವರ್ಧಂತಿ, ನೀಲಗೋಡ ಉತ್ಸವ, ಸಪ್ತಶತಿ ಪಾರಾಯಣ, ಆಂಜನೇಯ ಮೂಲ ಮಂತ್ರ ಹೋಮ, ಅಷ್ಟಾವಧಾನ ಸೇವೆ, ಹಾಗೂ ಮಹಾ ಅನ್ನಸಂತರ್ಪಣೆಗಳು ನಡೆದವು. ಜಗದ್ಗುರು ಶಂಕರಾಚಾರ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಸಂಚಾರಿ ಪೀಠ ಇವರಿಂದ ಆರ್ಶಿವಚನ ನಡೆಯಿತು. ವೇದಮೂರ್ತಿ ಶ್ರೀಧರ ಭಟ್ಟ ಷಡಕ್ಷರಿ ಗೋಕರ್ಣ, ವೇದಮೂರ್ತಿ ಸತ್ಯನಾರಾಯಣ ಯಾಜಿ ಬಳ್ಕೂರು ಇವರ ಆಚಾರ್ಯತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಟ್ಕಳ ಶಾಸಕ ಮಂಕಾಳ ವೈದ್ಯ, ಬಿಜೆಪಿ ಮುಖಂಡ ಯಶೋದರ ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ, ಸುನೀಲ ನಾಯ್ಕ, ಸುರಜ್ ನಾಯ್ಕ ಸೋನಿ, ಜಿಲ್ಲಾ ಪಂಚಾಯತ ಸದಸ್ಯೆ ಪುಷ್ಪಾಜಿ.ನಾಯ್ಕ, ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News Tagged With: ನೀಲಗೋಡ ಕ್ಷೇತ್ರ, ಲೋಕಕಲ್ಯಾಣಾರ್ಥ, ಶೃಂಗೇರಿ ಜಗದ್ಗುರು ಶಂಕರಾಚಾರ್ಯ, ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿ, ಸಂಪನ್ನ, ಸಹಸ್ರ ಚಂಡಿಕಾಯಾಗ, ಸಾವಿರಾರು ಭಕ್ತರು ಸಹಸ್ರ ಚಂಡಿಕಾಯಾಗ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar