ಹೊನ್ನಾವರ:
ಡಿ. 8 ರಂದು ನಿಗೂಢÀವಾಗಿ ಸಾವನ್ನಪ್ಪಿದ ಪರೇಶ ಮೇಸ್ತ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಭೇಟಿ ನೀಡಿ ಪರೇಶ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪರೇಶ ಕುಟುಂಬದವರೊಂದಿಗೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಗನ ಸಾವಿಗೆ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಮುಖರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಮೀನುಗಾರ ಮುಖಂಡ ಉಮೇಶ ಮೇಸ್ತ, ಲೋಕೇಶ ಮೇಸ್ತ ಹೊರತುಪಡಿಸಿ ಬೇರೆಯವರಿಗೆ ಅವಕಾಶವಿರಲಿಲ್ಲ. ಮಾಧ್ಯಮದವರು ಅಮಿತ್ ಷಾ ಅವರ ಪ್ರತಿಕ್ರಿಯೆಯನ್ನು ಕೇಳಲು ಬಂದ ಅವರಿಗೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಮಿತ್ ಷಾ ಮೃತ ಪರೇಶ ಕುಟುಂಬಕ್ಕೆ ಭೇಟಿ ನೀಡುವ ಸುದ್ದಿ ತಿಳಿದು ಪಟ್ಟಣದ ತುಳಸೀ ನಗರದಲ್ಲಿರುವ ಪರೇಶ ಮನೆ ಬಳಿ ಸಾರ್ವಜನಿಕರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಷಾ ಪರೇಶ ಮನೆಗೆ ಬರುತ್ತಿದ್ದಂತೆ ಜನರು ಜೈಕಾರದೊಂದಿಗೆ ಸ್ವಾಗತಿಸಿ ಅವರನ್ನು ಬರಮಾಡಿಕೊಂಡರು.
Leave a Comment