ಹೊನ್ನಾವರ:
ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು.ಹೊನ್ನಾವರ: ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು. ಸಂಘದ ಅದ್ಯಕ್ಷ ಶಿವರಾಜ ಮೇಸ್ತ ಹಾಗೂ ಕೊಂಕಣ ಖಾರ್ವಿ ಸಮಾಜ ಬಾಂಧವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಯಶೋಧರ ನಾಯ್ಕ ಟ್ರಸ್ಟ್ನ ಅಧ್ಯಕ್ಷ ಯಶೋಧರ ನಾಯ್ಕ, ಬೆಳಕು ಗ್ರಾಮಾಭಿವೃದ್ದಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯ್ಕ ತೊರ್ಕೆ, ಕಾಂಗ್ರೇಸ್ ಯುವ ಮುಖಂಡ ರವಿಕುಮಾರ ಶೆಟ್ಟಿ, ಸೇಫ್ ಸ್ಟಾರ್ ಬ್ಯಾಂಕಿನ ಜಿ.ಜಿ.ಶಂಕರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ `ಕೊಂಕಣ ಖಾರ್ವಿ ಸಮಾಜದ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಧಾರ್ಮಿಕ ಕಾರ್ಯಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಮೀನುಗಾರ ಮುಖಂಡ ಉಮೇಶ ಮೇಸ್ತ, ಬಿಜೆಪಿ ಮುಖಂಡ ಸೂರಜ್ ನಾಯ್ಕ ಸೋನಿ, ಸಮಾಜದ ಮುಖಂಡರಾದ ಸುರೇಶ ಮೇಸ್ತ, ನಾಗೇಶ ಮೇಸ್ತ, ಶಂಕರ ಮೇಸ್ತ, ಸತ್ಯಜಾವಗಲ್ ಹಾಗೂ ನೂರಾರು ಸಮಾಜದ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿರು. ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಹಾಗೂ ನಿತ್ಯಾನಂದ ಪಾಲೇಕರ್ ಸಂಗಡಿಗರಿಂದ ಭಜನಾ ಕಾರ್ಯಕ್ರಮ ನಡೆಯಿತು.
Leave a Comment