ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಪಿ.ಇ. ಸೊಸೈಟಿಯ ಉಪಾಧ್ಯಕ್ಷರಾದ ಕೃಷ್ಣಮೂರ್ತಿ ಭಟ್ಟ ಮಾತನಾಡಿ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಮತ್ತು ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದರ ಮೂಲಕ ತಮ್ಮ ವ್ಯಕ್ತತ್ವವನ್ನು ವಿಕಾಸಗೊಳಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ಎಂ. ಎಚ್. ಭಟ್ಟ ಮತ್ತು ಪ್ರೊ. ವಿ. ಎಸ್. ಭಟ್ಟ ಇವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಉಪಸ್ಥಿತರಿದ್ದ ಕಿಸಾನ ಸಂಘದ ಅಧ್ಯಕ್ಷರು ಮತ್ತು ಊರಿನ ಹಿರಿಯರಾದ ಶಂಭು ಭಟ್ಟರವರು ವಿದ್ಯಾರ್ಥಿಗಳ ಕಾರ್ಯವನ್ನು ಕೊಂಡಾಡಿದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್. ಎಸ್. ಹೆಗಡೆಯವರು ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಸಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ಜಿ. ಎಸ್. ಹೆಗಡೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ಥಾವಿಕ ಮಾತುಗಳನ್ನಾಡಿದರು. ಸಹ ಶಿಬಿರಾಧಿಕಾರಿಯಾದ ಪ್ರೊ. ಪ್ರಶಾಂತ ಹೆಗಡೆ ವಂದಿಸಿದರು. ಏಳು ದಿನದ ಈ ಶಿಬಿರದಲ್ಲಿ ವಿವಿಧ ಕಡೆ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿದ್ದಲ್ಲದೇ ಮತದಾನದ ಜಾಗೃತಿ ಜಾಥಾ ಕೈಗೊಂಡು ಮನೆಮನೆಗೆ ತೆರಳಿ ಮತದಾನ ಮತ್ತು ಶೌಚಾಲಯದ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು. ಮುಖ್ಯವಾಗಿ ಊರಿನ ಪ್ರಮುಖ ದೇವಾಲಯವಾದ ಉಮಾಮಹೇಶ್ವರ ದೇವಾಲಯದ ಸುತ್ತಮುತ್ತ ಸ್ವಚ್ಛಗೊಳಿಸಿದ್ದಲ್ಲದೇ ಗಿಡಗಂಟೆಗಳಿಂದ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಆವರಿಸಿದ್ದ ದೇವಾಲಯದ ಪುಷ್ಕರಣಿಯನ್ನು ಸ್ವಚ್ಛಗೊಳಿಸಲಾಯಿತು. ಅಲ್ಲದೇ ಪ್ರತಿದಿನ ಮಧ್ಯಾಹ್ನ 4 ಗಂಟೆಯಿಂದ ವಿವಿಧ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಿಬಿರಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಮತ್ತು ಊರ ನಾಗರಿಕರಿಂದ ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
Leave a Comment