• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ರೀಡೆಗಳಿಂದ ಮನುಷ್ಯನ ಜಡತ್ವ ದೂರವಾಗುತ್ತದೆ : ನಾಗರಾಜ ನಾಯಕ ತೊರ್ಕೆ

March 7, 2018 by Gaju Gokarna Leave a Comment

ಕುಮಟಾ ತಾಲೂಕಿನ ಬೆಟ್ಕುಳಿಯ ಸಂಗಮ ಯುವಕ ಸಂಘ ಇವರ ಆಶ್ರಯದಲ್ಲಿ ದಿನಾಂಕ 02-03-18 ರಂದು ಊರ ನಾಗರಿಕರ ಹಾಗೂ ದಾನಿಗಳ ಸಹಕಾರದೊಂದಿಗೆ ಬೆಟ್ಕುಳಿಯ ಸಂಗಮ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿ ಹಾಗೂ ಡಾನ್ಸ್ ಡಿವೋಟರ್ಸ್ ಹೊಸ್ಕಟ್ಟ ಇವರಿಂದ ಡಾನ್ಸ ಧಮಾಕಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಕಬಡ್ಡಿ ಅಸೋಸಿಯೇಷನ್‍ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಮಾತನಾಡಿ ಸಂಗಮ ಯುವಕ ಸಂಘದವರು ಅತ್ಯಂತ ಯಶಸ್ವಿಯಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದಾರೆ. ಇಂತಹ ಕಾರ್ಯಗಳು ಜರುಗುವುದರಿಂದ ಪರಸ್ಪರರಲ್ಲಿ ಸೌಹಾರ್ದತೆ ಉಂಟಾಗುತ್ತದೆ ಜೊತೆಗೆ ಕ್ರೀಡಾಸಕ್ತಿ ಬೆಳೆಯುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಕ್ರೀಡೆಗಳಿಂದ ಮಾನವನ ಸರ್ವಾಂಗೀಣ ಅಭವೃದ್ಧಿ ಸಾಧ್ಯವಿದೆ. ಇಲ್ಲಿ ಕ್ರೀಡೆಗಳೊಂದಿಗೆ ಡಾನ್ಸ ಧಮಾಕಾದಂತಹ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ಥಳೀಯರಿಗೆ ಮನರಂಜನೆಯನ್ನು ನೀಡಿದ ಸಂಗಮ ಯುವಕ ಸಂಘದವರ ಕಾರ್ಯ ಶ್ಲಾಘನೀಯ ಎಂದರು. ಕ್ರೀಡೆಗಳಿಂದ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುವುದರಿಂದ ಮನುಷ್ಯನ ಜಡತ್ವ ದೂರವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದರ ಮೂಲಕ ಚಟುವಟಿಕೆಯಿಂದಿರಬೇಕು ಎಂದರು. ಇಲ್ಲಿ ಕೇವಲ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗಷ್ಟೇ ಆದ್ಯತೆ ನೀಡದೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ವಿಶೇಷ ಮಕ್ಕಳ ಶಾಲೆ ನಡೆಸುತ್ತಿರುವ ಸಿರಿಲ್ ಲೋಪಿಸ್ ಹಾಗೂ ಪ್ರತಿಭಾವಂತ ವಿಕಲಚೇತನ ಕುಮಾರ ಸಂದೇಶ ಹರಿಕಾಂತ ಹಾಗೂ ಜನತಾ ವಿದ್ಯಾಲಯದ ಶಿಕ್ಷಕರಾದ ರಾಜು ನಾಯ್ಕ ಇವರನ್ನು ಸನ್ಮಾನಿಸಿರುವುದು ಅರ್ಥಪೂರ್ಣವಾಗಿದೆ. ಮುಂದಿನ ದಿನಗಳಲ್ಲೂ ಈ ಸಂಘಟನೆಯಿಂದ ಇನ್ನೂ ಹತ್ತು ಹಲವಾರು ಸಾಮಾಜಿಕ ಕಾರ್ಯಗಳು ಜರುಗಲಿ ಈ ಮೂಲಕ ಸರಕಾರದ ಹತ್ತು ಹಲವಾರು ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ನಿರಂತರವಾಗಿ ಜರುಗಲಿ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಪ್ರದೀಪ ನಾಯಕ ದೇವರಬಾವಿ, ಉದ್ಯಮಿ ಕೃಷ್ಣ ಜೆ. ಗೌಡ, ನಿವೃತ್ತ ಶಿಕ್ಷಕ ಶಂಕರ ನಾರಾಯಣ ಗೌಡ, ಲಕ್ಷ್ಮಣ ಹನುಮಂತ ಹರಿಕಾಂತ ರಾಮ ಕೆ. ಪಟಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Kumta News Tagged With: ಕಬಡ್ಡಿ ಅಸೋಸಿಯೇಷನ್‍, ಕುಮಟಾ, ಕ್ರೀಡೆಗಳಿಂದ ಮನುಷ್ಯನ ಜಡತ್ವ, ಡಾನ್ಸ ಧಮಾಕಾ, ಡಾನ್ಸ್ ಡಿವೋಟರ್ಸ್ ಹೊಸ್ಕಟ್ಟ, ದೂರವಾಗುತ್ತದೆ, ನಾಗರಾಜ ನಾಯಕ ತೊರ್ಕೆ, ಬೆಟ್ಕುಳಿಯ ಸಂಗಮ, ಸಂಗಮ ಕ್ರೀಡಾಂಗಣ, ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar