• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದಿಂದ ಮನಸ್ಸು ನವಚೈತನ್ಯದಿಂದ ಕೂಡಿರುತ್ತದೆ. – ನಾಗರಾಜ ನಾಯಕ ತೊರ್ಕೆ

March 8, 2018 by Gaju Gokarna Leave a Comment

ಗೋಕರ್ಣದ ಆಲದಕೆರೆಯ ಶ್ರೀ ಪಂಚಬ್ರಹ್ಮ ಯುವಕ ಸಂಘದ ಆಶ್ರಯದಲ್ಲಿ 14 ನೇ ವರ್ಷದ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ದಿನಾಂಕ 3/3 ರಂದು ಆಲದಕೆರೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗೋಕರ್ಣದ ಆಲದಕೆರೆಯ ಶ್ರೀ ಪಂಚಬ್ರಹ್ಮ ಯುವಕ ಸಂಘದ ಆಶ್ರಯದಲ್ಲಿ 14 ನೇ ವರ್ಷದ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ದಿನಾಂಕ 3/3 ರಂದು ಆಲದಕೆರೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಈ ಪಂದ್ಯಾವಳಿಯನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಂಚಬ್ರಹ್ಮ ಯುವಕ ಸಂಘದವರು ಸತತ 14 ನೇ ವರ್ಷದಲ್ಲಿ ಈ ಪಂದ್ಯಾವಳಿಯನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಇಂತಹ ಯುವಕ ಶಕ್ತಿಯ ಪಾತ್ರ ಮಹತ್ವವಾದದ್ದು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದಿಂದ ಉತ್ತಮ ಆರೋಗ್ಯದೊಂದಿಗೆ ಮನಸ್ಸು ನವಚೈತನ್ಯದಿಂದ ಕೂಡಿರುತ್ತದೆ. ಆಲಸ್ಯವನ್ನು ತೊಲಗಿಸಿ ಸದಾ ಚಟುವಟಿಕೆಯಿಂದಿರುವಲ್ಲಿ  ಈ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡೆಗಳೊಂದಿಗೆ ಇತರೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಸರಕಾರದ ಯೋಜನೆಗಳನ್ನು ಬಡ ಜನರಿಗೆ ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಜಾಗೃತರಾಗಬೇಕು. ಕಳೆದ ಮೂರು ವರ್ಷಗಳಿಂದ ಈ ಕಾರ್ಯಕ್ರಮಕ್ಕೆ ತಾವು ಆಗಮಿಸುತ್ತಿದ್ದು ಕಳೆದ ಬಾರಿ ಪದ್ಮಶ್ರೀ ಪುರಸ್ಕøತೆ ಸುಕ್ರಿ ಬೊಮ್ಮ ಗೌಡ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದನ್ನು ಸ್ಮರಿಸಿಕೊಂಡರು. ಹಾಗೂ ಹಾಲಕ್ಕಿ ಸಮಾಜದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಮುಂದುವರಿಯುವಲಿ ಇಂತಹ ಸಂಘಟನೆ ಸಾಂಕೇತಿಕವಾಗಿದೆ ಎಂದರು.       ಗೋವಿಂದ ಗೌಡ ಅವರು ಕ್ರೀಡಾಂಗಣದ ಉದ್ಘಾಟನೆಯನ್ನು ನೇರವೇರಿಸಿದರು.     ತಾಲೂಕ ಪಂಚಾಯತ ಸದಸ್ಯರಾದ ಮಹೇಶ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಮಹಾಬಲೇಶ್ವರ ಗೌಡ, ಮಂಗಳ ಮೂರ್ತಿ ಸಭಾಹಿತ, ರಾಮಮೂರ್ತಿ ನಾಯಕ, ಗಜಾನನ ರಾಮ ನಾಯಕ, ಶಂಕರ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Kumta News Tagged With: ಅಂತರಜಿಲ್ಲಾ ಮಟ್ಟ, ಆಲದಕೆರೆ, ಕ್ರೀಡಾ ಚಟುವಟಿಕೆ, ಗೋಕರ್ಣದ ಆಲದಕೆರೆ, ನವಚೈತನ್ಯದಿಂದ ಕೂಡಿರುತ್ತದೆ, ನಾಗರಾಜ ನಾಯಕ ತೊರ್ಕೆ, ಪಾಲ್ಗೊಳ್ಳುವದಿಂದ, ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಮನಸ್ಸು

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar