ಹೊನ್ನಾವರ:
ಮಾತೃಭಾಷೆಯಿಂದ ಮಾತ್ರ ವಿದ್ಯಾರ್ಥಿಗಳ ಸರಿಯಾದ ವ್ಯಕ್ತಿತ್ವ ವಿಕಸನ ಸಾಧ್ಯ. ಆದರೆ ಇಂದು ಕೆಲವರ ಸ್ವಾರ್ಥಕ್ಕಾಗಿ ಕನ್ನಡದ ಮೂಲಕ ಕವಿಯುವ ಅವಕಾಶ ತಪ್ಪಿಹೋಗಿ ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್ ಆರ್ ನಾಯಕ ಹೇಳಿದರು.
ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮಿನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿಗಳು ಎಲ್ಲ ಭಾಷೆಗಳನ್ನು ಕಲಿಯಬೇಕು. ಆದರೆ ಕನ್ನಡ ಮೂಲಕ ಶಿಕ್ಷಣವನ್ನು ಪಡೆಯಬೇಕು. ಆಗ ಮಾತ್ರವೇ ಸರಿಯಾದ ಕಲಿಕೆ ಸಾಧ್ಯ .ಜಾಗತೀಕರಣ ಇಂದಿನ ದಿನಗಳಲ್ಲಿ ಅನ್ಯಭಾಷೆಗಳ ಪ್ರಭಾವದಿಂದ ಕನ್ನಡ ಕರ್ನಾಟಕದಲ್ಲಿ ತನ್ನ ಸಾರ್ವಭೌಮತ್ವದ ಅಧಿಕಾರವನ್ನು ಕಳೆದುಕೊಳ್ಳುತ್ತಿದೆ. ಇಂಗ್ಲಿಶ್ ನ ಪ್ರಭಾವದಿಂದ ಇಂದು ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಮೂಲೆಗುಂಪಾಗಿದೆ ನಮ್ಮ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದ ಇಂತಹ ದುಸ್ಥಿತಿ ಬಂದಿದೆ ಇದಲ್ಲದೆ ಇಂದು ಕಲೆಗಳು ಜನರಿಂದ ದೂರಾಗುತ್ತಿವೆ. ಆದರೆ ಕಲೆ ಸಾಹಿತ್ಯಗಳಿಲ್ಲದ ಊರಿನಲ್ಲಿ ಹುಚ್ಚಾಸ್ಪತ್ರೆಗಳನ್ನು ತೆರೆಯಬೇಕಾಗುತ್ತದೆ ಮಾನವರಿಗೆ ಬುದ್ಧಿ ಬಲ ಕಲೆ ಮತ್ತು ಶೀಲಗಳು ಮುಖ್ಯವಾದವು. ಅವುಗಳಿಗೆ ಆದ್ಯತೆ ಕೊಟ್ಟು ವಿದ್ಯಾರ್ಥಿಗಳು ಕನ್ನಡ ಪ್ರಜ್ಞೆಯನ್ನು ವಿಶ್ವಪ್ರಜ್ಞೆಯಾಗಿಸ ಬೇಕೆಂದರು.
ಈ ಸಂದರ್ಭದಲ್ಲಿ ಸಿಡಿಸಿ ಸದಸ್ಯರಾದ ಡಾ. ಶ್ರೀಪಾದ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿಗಳ ಶಿಸ್ತನ್ನು ರೂಢಿಸಿಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಿ ಬೆಳೆಯಬೇಕೆಂದರು. ಡಾ. ಸುಮಂಗಲ ನಾಯಕ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕøತಿಕ ಸಮಿತಿಯ ಸಂಚಾಲಕರಾದ ಡಾ. ರಂಗನಾಥ ಕೆ. ಆರ್ ಪ್ರಾಸ್ತಾವಿಕ ನುಡಿಗಳನ್ನಾಡುತ್ತ ಎಲ್ಲರನ್ನು ಸ್ವಾಗತಿಸಿದರು. ಸಿಡಿಸಿ ಸದಸ್ಯರು ಎಲ್ಲ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Leave a Comment