ಹೊನ್ನಾವರ: ನಮ್ಮ ಬಹುದಿನಗಳ ಬೇಡಿಕೆಯಾದ 6ನೇ ವೇತನ ಆಯೋಗ ಹಾಗೂ ಪಿಂಚಣೆ ಸಮಸ್ಯೆ ಬಗೆಹರಿಸಲು ನಮ್ಮ ಸಂಘಟನೆ ಬಹುಮುಖ್ಯ ಪಾತ್ರ ವಹಿಸಿದೆ. ಸಂಘಗಳು ಸಂಘಟಿತ ಮನೋಭಾವದಿಂದ ಕಾರ್ಯ ನಿರ್ವಹಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕಿನ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆದ ತಾಲೂಕ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 5ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ ಮಾಡಿಕೊಂಡು ವಿವಿಧ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಪ್ರಸುತ್ತ ವರ್ಷ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಹೊನ್ನಾವರದಲ್ಲಿ ಯಶ್ವಸಿಯಾಗಿ ನಡೆಸಿದ್ದೇವೆ. ಈ ಹಿಂದೆ ಸೇವೆ ಸಲ್ಲಿಸಿದ ನಿವೃತ್ತ ನೌಕರರನ್ನು ಸನ್ಮಾನಿಸುವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಯನ್ನು ಗುರುತಿಸಿ ಗೌರವಿಸುವ ವೇದಿಕೆ ಇದಾಗಿದೆ.
Leave a Comment