• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ

April 6, 2018 by Gaju Gokarna Leave a Comment

ಕುಮಟಾ ತಾಲೂಕಿನ ಅಘನಾಶಿನಿಯ ಶ್ರೀ ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ದಿನಾಂಕ 01-02-18 ರಂದು ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನದ ಹತ್ತಿರ ಅಘನಾಶಿನಿ ಸುಗ್ಗಿ ಉತ್ಸವ – 2018 ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.  ಈ ಕಾರ್ಯಕ್ರಮವನ್ನು ಉದ್ಯಮಿ ಸುಬ್ರಾಯ ವಾಳ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಿದ ಆಯೋಜಕರನ್ನು ಶ್ಲಾಘಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿ.ಜೆ.ಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷರೂ ಆದ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಈ ಪ್ರದೇಶದವರು ಒಗ್ಗಟ್ಟಿನಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ನಮ್ಮ ದೇಶಕ್ಕೆ ಸೇವೆ ನೀಡಿದ ಸೈನಿಕರನ್ನು ಸನ್ಮಾನಿಸಿರುವುದು ಅತ್ಯಂತ ಶ್ಲಾಘನೀಯವಾದದ್ದು.  ಇದರಿಂದ ಪ್ರೇರೇಪಿತರಾಗಿ ಯುವಕರು ದೇಶಸೇವೆಗೆ ಮುನ್ನುಗ್ಗುವಂತಾಗಲಿ ಎಂದು ನುಡಿದರು. ಸುಗ್ಗಿ ಹಬ್ಬವು ಈ ಪ್ರದೇಶದಲ್ಲಿ ಹಬ್ಬದ ಸಂಭ್ರಮವನ್ನು ಸೃಷ್ಟಿ ಮಾಡಿದೆ ಅಲ್ಲದೆ ಸ್ಥಳೀಯ ಪ್ರತಿಭೆಗಳಾದ ತನುಷ ಹಾಗೂ ದೀಕ್ಷಾ ಇವರಿಗೆ ಈ ವೇದಿಕೆಯಲ್ಲಿ ಅವಕಾಶ ನೀಡಿರುವುದು ಅರ್ಥಪೂರ್ಣವಾಗಿದೆ. ಅವರು ಈ ಹಿಂದೆ ಅದೆಷ್ಟೋ ಒಳ್ಳೊಳ್ಳೆ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದರೂ ಕೂಡ ಸ್ಥಳೀಯ ವೇದಿಕೆಯಲ್ಲಿ ಕಾರ್ಯಕ್ರಮ ನೀಡುತ್ತಿರುವುದು ಎಲ್ಲರಿಗೂ ಹರ್ಷವನ್ನು ತಂದಿದೆ ಎಂದು ನುಡಿದು ಅವರ ಉತ್ತಮ ಹಾಡುಗಾರಿಕೆಯನ್ನು ಮೆಚ್ಚಿ ಅವರಿಗೆ ಶುಭ ಹಾರೈಸಿದರು. ಇದೇ ವೇದಿಕೆಯಲ್ಲಿ ನಿವೃತ್ತ ಸೈನಿಕರಾದ ಶ್ರೀ ರಾಧಾಕೃಷ್ಣ ನಾಯ್ಕ ಹಾಗೂ ಶ್ರೀ ಚಂದ್ರಶೇಖರ ನಾಯ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿ.ಜೆ.ಪಿ ಮುಖಂಡರಾದ ಡಾ|| ಜಿ.ಜಿ. ಹೆಗಡೆ ಅವರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ವೆಂಕಟ್ರಮಣ ಗೌಡ, ಅಶೋಕ ಗಂಗಾಧರ ನಾಯ್ಕ, ಯಶವಂತ ಅಂಬಿಗ, ಗಣ್ಯ ರಘುವೀರ ಶೆಟ್ಟಿ ಹಾಗೂ ಊರನಾಗರಿಕರು ಉಪಸ್ಥಿತರಿದ್ದರು.      ಸಭಾ ಕಾರ್ಯಕ್ರಮದ ನಂತರ ಬಿ. ಎಸ್. ಆರ್ ನಾಟಕ ಸಂಘ (ಗುಬ್ಬಿ) ಇವರಿಂದ ಕುಂಟ ಕೋಣ ಮೂಕ ಜಾಣ ಎಂಬ ನಾಟಕ ಪ್ರದರ್ಶಿತಗೊಂಡಿತು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Kumta News Tagged With: ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನ, ಅತ್ಯುತ್ತಮ ರೀತಿ, ಅರ್ಥಪೂರ್ಣ, ಉದ್ಯಮಿ ಸುಬ್ರಾಯ ವಾಳ್ಕೆ, ದೀಪ ಬೆಳಗಿಸಿ, ನಾಗರಾಜ ನಾಯಕ ತೊರ್ಕೆ, ನೀಡಿದ, ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್, ವೇದಿಕೆ, ಸುಗ್ಗಿ ಉತ್ಸವ, ಸ್ಥಳೀಯ ಪ್ರತಿಭೆ, ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar