• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ;ಸುನೀಲ್ ಬಿ. ನಾಯ್ಕ

April 18, 2018 by Gaju Gokarna Leave a Comment

ಹೊನ್ನಾವರ :

ಬಿಜೆಪಿಯ ಭಟ್ಕಳ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಯುವ ಮುಖಂಡ ಸುನೀಲ್ ಬಿ. ನಾಯ್ಕ ಟಿಕೇಟ್ ಘೋಷಣೆಯಾದ ಹಿನ್ನಲೆಯಲ್ಲಿ ವಿಘ್ನನಿವಾರಕನಾದ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಯುವ ಕಾರ್ಯಕರ್ತರೊಂದಿಗೆ ಕ್ಷೇತ್ರದ ಹಲವು ಭಾಗಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.
ಈ ಸಂದರ್ಭದಲ್ಲಿ ಸುನೀಲ್ ನಾಯ್ಕ ಮಾತನಾಡಿ ಭಾರತೀಯ ಜನತಾ ಪಕ್ಷ ಬಹುದೊಡ್ಡ ಜವಾಬ್ದಾರಿಯಾದ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಈ ದಿನ ಇಡಗುಂಜಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಇಂದಿನಿಂದಲೆ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇನೆ. ಪಕ್ಷದ ಎಲ್ಲಾ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಈ ಬಾರಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇನೆ.
ಈ ಬಾರಿಯ ಚುನಾವಣೆಗೆ ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಗಳನ್ನು ಹಾಗೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಮಾಡಿದ ಸಾಧನೆ ಮತ್ತು ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರ ಜನಪರ ಕಾಳಜಿ ಹಾಗೂ ಹಿಂದುತ್ವದ ನಿಲುವನ್ನು ಪ್ರತಿ ಮನೆಮನೆಗೆ ತಲುಪಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲುವುದು ಶತಸಿದ್ದ ಎಂದರು..
ಹಿರಿಯ ಮುಖಂಡರು ಹಾಗೂ ಬಳ್ಕೂರು ಗ್ರಾಮ ಪಂಚಾಯತ ಅಧ್ಯಕ್ಷ ಕೇಶವ ನಾಯ್ಕ ಮಾತನಾಡಿ ಭಾರತೀಯ ಜನತಾ ಪಾರ್ಟಿ ಒಬ್ಬ ನಿಷ್ಟಾವಂತ ಕಾರ್ಯಕರ್ತ ಹಾಗೂ ಯುವನಾಯಕ ಸುನೀಲ ನಾಯ್ಕ ಇವರನ್ನು ಕಣಕ್ಕಿಳಿಸಿದೆ. ನರೇಂದ್ರ ಮೋದಿಯವರ ಕನಸು ನನಸು ಮಾಡಲು ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ವಿವಿಧ ಯೋಜನೆಯನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಚುನಾವಣೆಯನ್ನು ಎದುರಿಸಬೇಕಾಗಿದೆ. ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕಾ ಉಪಾಧ್ಯಕ್ಷ ಗಣಪತಿ ನಾಯ್ಕ ಬಿ.ಟಿ, ಬಳ್ಕೂರ ವಿಎಸ್‍ಎಸ್ ಬ್ಯಾಂಕ್ ಅಧ್ಯಕ್ಷ ಶಂಭು ಬೈಲಾರ್, ಇಡಗುಂಜಿ ಗ್ರಾಮ ಪಂಚಾಯತ ಸದಸ್ಯೆ ರಾಧಾ ನಾಯ್ಕ, ಮುಖಂಡರಾದ ಕೆ.ಜಿ.ಕರಿಮಣಿ, ನರಸಿಂಹ ನಾಯ್ಕ, ಎಮ್.ಎನ್.ನಾಯ್ಕ, ಎಮ್.ಎಮ್.ನಾಯ್ಕ, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

 

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News Tagged With: ಅಗತ್ಯ, ಇಡಗುಂಜಿ ಗ್ರಾಮ, ಇಡಗುಂಜಿ ಮಹಾಗಣಪತಿ ದೇವಸ್ಥಾನ, ಕಾರ್ಯಕರ್ತರ ಶ್ರಮ, ಜಯಭೇರಿ, ಪಂಚಾಯತ ಸದಸ್ಯೆ, ಬಳ್ಕೂರು ಗ್ರಾಮ, ಬಾರಿಸಲು, ಬಿಜೆಪಿ, ಬಿಜೆಪಿಯ ಭಟ್ಕಳ ಕ್ಷೇತ್ರ, ಬಿರುಸಿನ ಪ್ರಚಾರ, ಭಟ್ಕಳ ಕ್ಷೇತ್ರ, ರಾಧಾ ನಾಯ್ಕ, ವಿಘ್ನನಿವಾರಕ, ಶಂಭು ಬೈಲಾರ್, ಸುನೀಲ್ ಬಿ. ನಾಯ್ಕ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar