ಹೊನ್ನಾವರ : ಕರ್ನಾಟಕ ವಿಧಾನಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೆನರ್ ಮತ್ತು ಕರ್ನಾಟಕ ಸರಕಾರದ ಜನಪ್ರಿಯ ಹಿರಿಯ ಸಚಿವ ಆರ್. ವಿ. ದೇಶಪಾಂಡೆಯವರು ಚುನಾವಣಾ ಪ್ರಚಾರಾರ್ಥ ಬರುವ ಗುರುವಾರ ದಿ. 3 ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.
ಅವರು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಜನಪ್ರಿಯ ಶಾಸಕಿ ಶಾರದಾ ಶೆಟ್ಟಿಯವರ ಪರವಾಗಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ.
ಅಂದು ಅಪರಾಹ್ನ 2:30 ಗಂಟೆಗೆ ಹೊನ್ನಾವರ ಪಟ್ಟಣದ ಶರಾವತಿ ಸರ್ಕಲ್ ಬಳಿ ಇರುವ ಬೃದರ್ಸ್ ಸ್ಕೂಲ್ ಆವರಣದಲ್ಲಿ ಸಾರ್ವನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ 3:30 ಗಂಟೆಗೆ ಹೆಬ್ಬಾನಕೇರಿಯಲ್ಲಿ, 4:30 ಗಂಟೆಗೆ ಕಡ್ತೋಕಾದಲ್ಲಿ ಮತ್ತು 5:30 ಗಂಟೆಗೆ ಹಳದೀಪುರದ ಅಗ್ರಹಾರದ ರಥಬೀದಿಯಲ್ಲಿ ಚುನಾವಣಾ ಪ್ರಚಾರಾರ್ಥ ಭಾಷಣ ಮಾಡಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು, ಅಭಿಮಾನಿಗಳು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪತ್ರಿಕಾ ಹೇಳಿಕೆಯ ಮೂಲಕ ಮನವಿ ಮಾಡಿದಾ
Leave a Comment