ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ ಹರಿಶ್ಚಂದ್ರ ಗೋವಿಂದ ನಾಯ್ಕ ಆಗ್ರಹಿಸಿ ಮತಯಾಚಿಸಿದರು. ಬಾಯಿಯಲ್ಲೇ ಬಡಾಯಿ ಕೊಚ್ಚಿಕೊಳ್ಳುವ ಶಾಸಕ ಮಂಕಾಳ ವೈದ್ಯ ನಮ್ಮ ಊರಿಗೆ ಬಂದ 40 ಕೋಟಿ ವೆಚ್ಚದ ಸೇತುವೆಯನ್ನು ದುರುದ್ದೇಶದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಇದಕ್ಕೆ ಈ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುವ ಸಂದರ್ಭ ಒದಗಿ ಬಂದಿದೆ. ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಅವರನ್ನು ಈ ಬಾರಿ ಬಹುಮತದಿಂದ ಆರಿಸಿ ತರುತ್ತೇವೆ. ನಮ್ಮ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೆಂಕಟೇಶ ಭಟ್, ಉಲ್ಲಾಸ ಶ್ಯಾನಭಾಗ, ಅರವಿಂದ್ ಭಕ್ತ, ಮಾದೇವ ಗೌಡ, ವಿನಾಯಕ ನಾಯ್ಕ, ತಿಮ್ಮಪ್ಪ ನಾಯ್ಕ, ಎಂ.ಟಿ.ನಾಯ್ಕ ಇತರರು ಇದ್ದರು.
Leave a Comment