ಹೊನ್ನಾವರ :
44ರ ಹರೆಯದಲ್ಲಿ ಅತ್ಯಂತ ಚಿಕ್ಕ ವಯಸ್ಸಿನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಪ್ರಧಾನಿ ದಿ. ರಾಜೀವ್ಗಾಂಧಿ ಭವ್ಯ ಭಾರತದ ಕನಸನ್ನು ಕಂಡಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ 27ನೇ ಪುಣ್ಯತಿಥಿ ಕಾರ್ಯಕ್ರದಲ್ಲಿ ಸೇರಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಈ ದೇಶದ ಶಕ್ತಿ ಯುವಕರು ಎಂದು ನಂಬಿದ್ದ ರಾಜೀವ್ ಗಾಂಧಿ ತನ್ನ ಅಧಿಕಾರಾವಧಿಯಲ್ಲಿ ದೇಶದ ಯುವಕರಿಗೆ 18ನೇ ವಯಸ್ಸಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ ಲೋಕಸಭೆಯಲ್ಲಿ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು. ದೂರದ ಅಮೇರಿಕಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ಆದುನಿಕ ತಂತ್ರಜ್ಞಾನ ಪಿತಾಮಹ ಸ್ಯಾಮ್ ಪಿತ್ರಾಡೊರÀನ್ನು ಭಾರತಕ್ಕೆ ಕರೆತಂದು ಭಾರತದಲ್ಲಿ ಕಂಪ್ಯೂಟರ್ ಯುಗಕ್ಕೆ ನಾಂದಿ ಹಾಡಿದ್ದರು ಎಂದರು. ಇಂದು ಭಾರತದಲ್ಲಿ ಮೊಬೈಲ್ ಕಂಪ್ಯೂಟರ್ ತಂತ್ರಜ್ಞಾನ ಇಷ್ಟೊಂದು ಎತ್ತರಕ್ಕೆ ಬೆಳೆದಿದ್ದರೆ ಅದು ದಿ. ರಾಜೀವ್ ಗಾಂಧಿಯವರ ಶ್ರಮ ಎಂದು ಹೆಮ್ಮೆ ವ್ಯಕ್ತ ಪಡಿಸಿದರು.
ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷೆ ರಾಜಶ್ರೀ ಬಾಲಚಂದ್ರ ನಾಯ್ಕ ಮಾತನಾಡಿ ಇಂದಿನ ರಾಜಕೀಯ ಕ್ಷೇತ್ರದಲ್ಲಿ ಓರ್ವ ಮಹಿಳೆಯಾಗಿ ನಮ್ಮಂತಾ ಲಕ್ಷಾಂತರ ಮಹಿಳೆಯರು ಅಧಿಕಾರ ಸ್ಥಾನ ಮಾನ ಹೊಂದಿದ್ದರೆ ಅದು ದಿ. ರಾಜೀವ ಗಾಂಧಿಯವರು ಪಂಚಾಯತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ನೀಡಿದ ಮಿಸಲಾತಿಯ ಕೊಡುಗೆಯಿಂದ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸೇರಿದ ಪಕ್ಷದ ಎಲ್ಲಾ ಕಾರ್ಯಕರ್ತರು ದಿ. ರಾಜೀವ್ ಗಾಂಧಿಯವರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಎಲ್ಲರೂ ಒಂದು ನಿಮೀಷ ಮೌನ ಆಚರಿಸುವ ಮೂಲಕ ದಿ. ರಾಜೀವ ಗಾಂಧಿಯವರ ಆತ್ಮಕ್ಕೆ ಶಾಂತಿ ಕೋರಿದರು.
ಕಾರ್ಯಕ್ರಮದಲ್ಲಿ ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಪ್ರಧಾನ ಕಾರ್ಯದರ್ಶಿ ಗಣಪತಿ ಮೇಸ್ತ, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ದಾಮೋದರ ನಾಯ್ಕ, ಲಂಭೋದರ ನಾಯ್ಕ, ವಿನಾಯಕ ನಾಯ್ಕ, ಕಾಂಗ್ರೇಸ್ ಇಂಟಕ್ ಅಧ್ಯಕ್ಷ ಆಗ್ನೇಲ್ ಡಾಯಸ್, ನೆಲ್ಸನ್ ರೊಡ್ರಗೀಸ್, ಬಾಲಚಂದ್ರ ನಾಯ್ಕ, ಮಂಜುನಾಥ ಖಾರ್ವಿ, ಮೂಸಾ ಅಣ್ಣಿಗೇರಿ, ಜಕ್ರಿಯಾ ಜೋಗಮಠ, ಸುರೇಶ ಮೇಸ್ತ, ತುಳಸಿನಗರ, ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
Leave a Comment