ಹೊನ್ನಾವರ :É ನಿಧನ ಹೊಂದಿದ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಶಂಕರ ಹೆಗಡೆ ಕೊಡ್ಲಮಕ್ಕಿ, ಇವರ ಆತ್ಮಕ್ಕೆ ಶಾಂತಿ ಕೋರಿ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಸೇರಿದ ಪಕ್ಷದ ಮುಖಂಡರು ಒಂದು ನಿಮೀಷದ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ತೆಂಗೇರಿ, ಪಕ್ಷದ ಹಿರಿಯ ಮುಖಂಡ ಶಂಕರ ಹೆಗಡೆ ಕೂಡ್ಲಮಕ್ಕಿಯವರನ್ನು ಕಳೆದುಕೊಂಡ ಕಾಂಗ್ರೇಸ್ ಪಕ್ಷ ಈ ಭಾಗದಲ್ಲಿ ಬಡವಾಗಿದೆ ಎಂದು ದುಃಖಿಸಿದರು. ಹತ್ತಾರು ವರ್ಷಗಳ ಕಾಲ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಅವರು ಹೊನ್ನಾವರ ಜೇನು ಸಹಕಾರ ಸಂಘದ ಅಧ್ಯಕ್ಷರಾಗಿ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದರು.
Leave a Comment