ಹಳಿಯಾಳ:
ಕಳೆದ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ 2018-19 ನೇ ಸಾಲಿನ ವಾರ್ಷಿಕ ಬಜೆಟ್ನಲ್ಲಿ ಎಸ್ಸಿ/ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ಆ ಯೋಜನೆಯನ್ನು ಜಾರಿಗೊಳಿಸಿದೆ ಉಳಿದ ವಿದ್ಯಾರ್ಥಿಗಳ ಅನ್ಯಾಯ ಮಾಡುತ್ತಿದೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿಕ್ರಮವನ್ನು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ತೀವ್ರವಾಗಿ ಖಂಡಿಸುತ್ತಿದೆ. ಅಲ್ಲದೇ ರಾಜ್ಯದ ಸಾರಿಗೆ ಸಚಿವರು ಉಚಿತ ಬಸ್ ಪಾಸ್ ನೀಡಲಾಗುವುದಿಲ್ಲ ಎಂದು ಹೆಳಿದ ಹೇಳಿಕೆಯನ್ನು ವೀತ್ರವಾಗಿ ಖಂಡಿಸಿ ರಾಜ್ಯಾದ್ಯಾಂತ ಹೋರಾಟಕ್ಕೆ ಕರೆ ನೀಡಿದ್ದೂ ಹಳಿಯಾಳದಲ್ಲೂ ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ರಾಜ್ಯ ಸರ್ಕಾರ ಸಾರಿಗೆ ಸಚಿವರು ತಹಶೀಲ್ದಾರ ಕಛೇರಿಗೆ ಆಗಮಿಸಿ. ವಿ.ಪ. ಸದಸ್ಯ ಎಸ್ ಎಲ್ ಘೊಟ್ನೇಕರ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸಪಾಸ್ ನೀಡುವುದು ಅತೀ ಹೆಚ್ಚು ಶಾಲಾ –ಕಾಲೇಜುಗಳಿಗೆ ಹೋಗಲು ಪ್ರೋತ್ಸಾಹ ನೀಡಿದಂತಾಗುತ್ತದೆ. ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರದ ಗಮನ ಸೆಳೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಈಗಾಗಲೇ ಉಚಿತ ಬಸ್ ಪಾಸ್ಗಾಗಿ ರಾಜ್ಯಾದ್ಯಾಂತ ಹೋರಟವನ್ನು ನಡೆಸಿ. ರಾಜ್ಯದ ಶಿಕ್ಷಣ, ಹಣಕಾಸು ಮತ್ತು ಸಾರಿಗೆ ಇಲಾಖೆಗಳ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದ್ದು ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ, ರಾಜ್ಯಾದ್ಯಾಂತ ದಿನಾಂಕ :07-06-2018 ರಿಂದ ಬಸ್ ಪಾಸ್ಗಳನ್ನು ವಿತರಿಸಲಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಬಡ, ಪ್ರತಿಭಾವವಂತ ವಿದ್ಯಾರ್ಥಿಗಳಿಗಾಗಿ ಈ ಹಿಂದೆ ಕಾಂಗ್ರೇಸ್ ನೇತೃತ್ವ ಸಿದ್ಧರಾಮಯ್ಯ ಸರ್ಕಾರದ ಬಜೆಟ್ನಲ್ಲಿ ಘೋಷಿಸಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಬೇಕೆಂದು ಎಬಿವಿಪಿ ಆಗ್ರಹಿಸುತ್ತಿದೆ. ಈ ಸಂದರ್ಭದಲ್ಲಿ ಸಿದ್ಧು ಮದರಖಂಡಿ, ನಾಮದೇವ ನಂದಿಗದ್ದಾ, ಸುಜೀತ ತೇಲಂಗ, ತಾನಾಜಿ ಚಿಬ್ಬುಲಕರ, ಪವಿತ್ರಾ ಕಳ್ಳಿಮನಿ, ಕವಿತಾ ಪವಾರ ಇತರರು ಇದ್ದರು.
Leave a Comment