ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 4 ವರ್ಷದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಬಜೆಪಿ ಘಟಕದ ನಿರ್ದೇಶನದ ಮೇರೆಗೆ ಬೈಕ್ ರ್ಯಾಲಿ ಹಮಿಕೊಳ್ಳಲಾಗಿದ್ದು ಮುಂದಿನ ಮಹಾಯುದ್ದಕ್ಕೆ ಸನ್ನದ್ದರಾಗಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮ ಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು.
ಪಟ್ಟಣದಲ್ಲಿ ತಾಲೂಕಾ ಯುವ ಮೋರ್ಚಾ ವತಿಯಿಂದ ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಶನಿವಾರ ನಡೆದ ಬೈಕ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯಾದ್ಯಂತ ಪ್ರತಿ ತಾಲೂಕಾ ಮಟ್ಟದ ಪಟ್ಟಣ ಮತ್ತು ಗ್ರಾಮೀಣ ಭಾಗಗಳಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಶಾಸಕ ಸುನೀಲ ನಾಯ್ಕ ಮಾತನಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ ಹೆಗಡೆ ಅವರನ್ನು ಪ್ರಚಂಡ ಬಹುಮತದಿಂದ ಪುನರ್ ಆಯ್ಕೆ ಮಾಡಬೇಕು. ಕೇಂದ್ರದಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಕಾರ್ಯಕರ್ತರು ಬಿಜೆಪಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.
ರ್ಯಾಲಿಯಲ್ಲಿ ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ, ಪ್ರಧಾನ ಕಾರ್ಯದರ್ಶಿ ಮಂಜುನಾಥ ನಾಯ್ಕ, ರಾಜು ಭಂಡಾರಿ, ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಜನ್ನು, ಹಳದೀಪುರದ ಪರಮೇಶ್ವರ ನಾಯ್ಕ, ಉಮೇಶ ನಾಯ್ಕ, ಲೋಕೇಶ ಮೇಸ್ತ, ನಗರ ಘಟಕದ ಅಧ್ಯಕ್ಷ ದತ್ತಾತ್ರೆಯ ಮೇಸ್ತ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ವಿಘ್ನೇಶ ಹೆಗಡೆ, ಮಂಕಿ ಶ್ರೀಧರ ನಾಯ್ಕ ಮತ್ತಿತರರು ಪಾಲ್ಗೊಂಡಿದ್ದರು. ಯುವಮೋರ್ಚಾ ತಾಲೂಕಾ ಪ್ರಧಾನ ಕಾರ್ಯದರ್ಶಿ ಚಿತ್ತಾರ ಗಣಪತಿ ಗೌಡ ಸ್ವಾಗತಿಸಿದರು. ತಾಲೂಕಾ ಅಧ್ಯಕ್ಷ ದೀಪಕ ಶೇಟ್ ವಂದಿಸಿದರು
ಪಟ್ಟಣದ ಶರಾವತಿ ವೃತ್ತದಿಂದ ಕಾಲೇಜು ಸರ್ಕಲ್ ಮೂಲಕ ಕರ್ಕಿನಾಕಾ, ದುರ್ಗಾಕೇರಿ ಬಾಜಾರ್ ರಸ್ತೆ, ಮೂಲಕ ಇಡಗುಂಜಿ ವರೆಗೆ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.
Leave a Comment